1:47 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ವಿಧಾನಸಭೆ ಚಳಿಗಾಲದ ಅಧಿವೇಶನ ದಿನಾಂಕ ಶೀಘ್ರದಲ್ಲೇ ಪ್ರಕಟ: ಸ್ಪೀಕರ್ ಯು.ಟಿ.ಖಾದರ್

08/11/2023, 20:24

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಿದ್ಧತೆ ನಡೆಸಲಾಗುತ್ತಿದ್ದು, ಅಧಿವೇಶನದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಹೇಳಿದರು.
ವಿಧಾನಮಂಡಲ ಚಳಿಗಾಲದ ಅಧಿವೇಶನ ಸಂಬಂಧ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಕೈಗೊಂಡ ಸಿದ್ಧತೆಯನ್ನು ಮಂಗಳವಾರ ಪರಿಶೀಲಿಸಿದ ನಂತರ ಸ್ಪೀಕರ್ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶಿವಮೊಗ್ಗದಲ್ಲಿ
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಡಿಸೆಂಬರ್‌ನಲ್ಲಿ ಅಧಿವೇಶನ ನಡೆಯುವುದು ಖಚಿತ. ಅದಕ್ಕಾಗಿಯೇ ನಾವು ಇಲ್ಲಿಗೆ ಬಂದು ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ. ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಈ ಬಾರಿಯ ಅಧಿವೇಶನ ಮಾದರಿಯಾಗಲಿದೆ ಎಂಬ ಭರವಸೆಯಿದೆ. ಅಧಿವೇಶನಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು 10 ಸಮಿತಿಗಳನ್ನು ರಚಿಸುವಂತೆ ಜಿಲ್ಲಾಧಿಕಾರಿಗೆ ತಿಳಿಸಲಾಗಿದೆ. ವಿಧಾನಸಭೆ ಮತ್ತು ಪರಿಷತ್ ಸದಸ್ಯರಿಗೂ ಸೌಲಭ್ಯ ಕಲ್ಪಿಸಲು ಸೂಚನೆ ನೀಡಲಾಗಿದೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು