10:14 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ; ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ: ಮುದ್ರಣ ಜಾಹೀರಾತಿಗೆ ಅನುಮತಿ ಕಡ್ಡಾಯ

08/05/2023, 11:01

ಮಂಗಳೂರು (reporterkarnataka.com): ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 9 ಮತ್ತು ಮೇ 10 ರಂದು) ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ, ಸಂಘ-ಸಂಸ್ಥೆ, ವ್ಯಕ್ತಿಗತವಾಗಿ ಮುದ್ರಣ ಮಾಧ್ಯಮದಲ್ಲಿ ಚುನಾವಣೆಗೆ ಸಂಬಂಧಿಸಿದ ಜಾಹೀರಾತು ಪ್ರಕಟಿಸಬೇಕಾದಲ್ಲಿ ಸಂಬಂಧಿಸಿದ ಜಿಲ್ಲಾ ಅಥವಾ ರಾಜ್ಯ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಪೂರ್ವಾನುಮತಿ ಪಡೆಯವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
ಜಿಲ್ಲೆಯ ಚುನಾವಣಾ ಕಣದಲ್ಲಿರುವ ಅಭ್ಯøರ್ಥಿಗಳು ತಮ್ಮ ಚುನಾವಣಾ ಜಾಹೀರಾತನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಗೆ ನಿಗಧಿತ ಅನುಬಂಧ-ಸಿ ಅರ್ಜಿ ನಮೂನೆಯೊಂದಿಗೆ ಎರಡು ಸ್ವಯಂ ದೃಢೀಕೃತ ಜಾಹೀರಾತು ಪ್ರತಿಗಳನ್ನು ಸಲ್ಲಿಸಿ ಪೂರ್ವಾನುಮತಿ ಪಡೆದು ಜಾಹೀರಾತು ಪ್ರಕಟಿಸುವುದು ಕಡ್ಡಾಯವಾಗಿರುತ್ತದೆ.

ಇನ್ನು ಚುನಾವಣಾ ಬಹಿರಂಗ ಪ್ರಚಾರ ಮೇ 8 ರಂದು ಸಂಜೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಎಂದಿನಂತೆ ಜಿಲ್ಲಾ ಎಂ.ಸಿ.ಎಂ.ಸಿ. ಸಮಿತಿಯಿಂದ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗೆ ಮೇ 8 ರ ಸಂಜೆ 5 ಗಂಟೆ ವರೆಗಿನ ಅವಧಿಗೆ ಮಾತ್ರ ಸುದ್ದಿ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ, ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಚುನಾವಣಾ ಜಾಹೀರಾತು ಪ್ರಚಾರ ಪಡಿಸಲು ಸಮಿತಿಯಿಂದ ಪೂರ್ವಾನುಮತಿ ನೀಡಲಾಗುತ್ತದೆ.
ಇನ್ನು ಪತ್ರಿಕೆಗಳು ಮೇ 9 ಮತ್ತು 10ರಂದು ಯಾವುದೇ ಚುನಾವಣಾ ಜಾಹಿರಾತುಗಳನ್ನು ಪ್ರಕಟಿಸುವ ಮುನ್ನ ಎಂಸಿಎಂಸಿ ಸಮಿತಿಯಿಂದ ಪೂರ್ವಾನುಮತಿ ಪಡೆಯಲಾಗಿದಿಯೇ ಎಂಬುದನ್ನು ಖಾತ್ರಿಪಡಿಸಿಕೊಂಡ ಬಳಿಕವೇ ಜಾಹೀರಾತು ಪ್ರಕಟಿಸಬೇಕು. ಅನುಮತಿ ಇಲ್ಲದೆ ಹೋದಲ್ಲಿ ಜಾಹೀರಾತು ಪ್ರಕಟಿಸುವಂತಿಲ್ಲ.
ಮತದಾನದ ಪೂರ್ವ 72 ಗಂಟೆ ಅವಧಿಯಲ್ಲಿ ಬಿತ್ತರಿಸುವ ಸುದ್ದಿ, ಪ್ರಸಾರಗಳ ಮೇಲೆ ಚುನಾವಣ ಆಯೋಗ ತೀವ್ರ ನಿಗಾ ವಹಿಸಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು