1:18 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಿಧಾನ ಸಭೆ ಚುನಾವಣೆ: ಮಾಜಿ ಸಿಎಂ ಅವರೇ ಬಿಜೆಪಿಯ ಮೊದಲ ರೆಬೆಲ್ ಅಭ್ಯರ್ಥಿ!; ಜಗದೀಶ ಶೆಟ್ಟರ್ ಹೇಳಿದ್ದೇನು?

11/04/2023, 20:01

ಹುಬ್ಬಳ್ಳಿ(reporterkarnataka.com); ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದರೆ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದಿದ್ದರೂ ಸ್ಪರ್ಧಿಸಿಯೇ ಸಿದ್ದ ಎಂದು ಕೇಸರಿ ಪಾಳಯಕ್ಕೆ ಸೆಡ್ಡು ಹೊಡೆದಿದ್ದಾರೆ.
ಮೊನ್ನೆಯವರೆಗೂ ನನಗೆ ಟಿಕೆಟ್ ನೀಡುವ ಭರವಸೆ ನೀಡಲಾಗಿತ್ತು. ನಿನ್ನೆ ನಂಗೆ ಹೈಕಮಾಂಡ್ ನಿಂದ ಕರೆ ಮಾಡಿ ಬೇರೆಯವರಿಗೆ ಅವಕಾಶ ನೀಡಬೇಕು ಎಂದು ಹೇಳಲಾಯಿತು. ನಾನು ಅದನ್ನು ವಿರೋಧಿಸಿದೆ ಎಂದು 6 ಬಾರಿ ಶಾಸಕರಾದ ಶೆಟ್ಡರ್ ಮಾಧ್ಯಮದ ಮುಂದೆ ಅಳಲು ವ್ಯಕ್ತಪಡಿಸಿದರು.
ನನ್ನ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕಿ ಇಲ್ಲ. ನನ್ನ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪ ಇಲ್ಲ. 2018ರ ಚುನಾವಣೆಯಲ್ಲೂ 21 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದೇನೆ. ಪ್ರತಿ ಬಾರಿಯ ಚುನಾವಣೆಯಲ್ಲೂ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿದ್ದೇನೆ. ನನ್ನ ಕ್ಷೇತ್ರದಲ್ಲಿ ಮಾಡಲು ಇನ್ನಷ್ಟು ಕೆಲಸವಿದೆ. ಇನ್ನೊಂದು ಬಾರಿ ತನಗೆ ಅವಕಾಶ ನೀಡಬೇಕೆಂದು ಕೋರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ನುಡಿದರು.
ನಾನು ಈಗಾಗಲೇ ಚುನಾವಣೆಗೆ ಸಿದ್ದತೆ ಮಾಡಿದ್ದೇನೆ. 3 ತಿಂಗಳಿನಿಂದ ಎಲೆಕ್ಷನ್ ಸಿದ್ದತೆ ನಡೆದಿದ್ದೇನೆ. ಬಿಜೆಪಿ ಟಿಕೆಟ್ ಸಿಗದಿದ್ದರೂ ನಾನು ಸ್ಪರ್ಧಿಸಿಯೇ ಸಿದ್ಧ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು