7:32 AM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು