9:29 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು