4:19 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು