5:22 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು