7:26 PM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು