6:23 PM Friday24 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು