6:08 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು