6:13 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ…

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು