12:15 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು