2:23 AM Saturday27 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು