7:30 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು