1:32 AM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು