6:58 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು