9:26 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ವಿಧಿಯ ಕ್ರೂರ ಆಟ: ಮನೆ ಯಜಮಾನನ ಅಂತ್ಯ ಸಂಸ್ಕಾರ ವೇಳೆ ಹೊತ್ತಿ ಉರಿದ ಮನೆ; ಸೊತ್ತು ನಾಶ, ಹಸು- ಕುರಿಗಳ ಜೀವಂತ ದಹನ

01/08/2023, 17:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಿಯ ಕ್ರೂರತ್ವಕ್ಕೆ ಕಾಫಿನಾಡ ಈ ಘಟನೆ ಜೀವಂತ ಸಾಕ್ಷಿಯಾಗಿದೆ. ಮನೆ ಮಾಲೀಕನ ಅಂತ್ಯ ಸಂಸ್ಕಾರಕ್ಕೆ ಹೋದಾಗ ಮನೆ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ.
ಮನೆ ಸುಟ್ಟು ಕರಕಲಾಗಿ, ಕೊಟ್ಟಿಗೆಯಲ್ಲಿದ್ದ ರಾಸುಗಳ ಸಜೀವ ದಹನವಾಗಿದೆ.


ಮನೆ ಮಾಲೀಕ ಹನುಮಂತಪ್ಪ ಮರಣ ಹೊಂದಿದ್ದರು. ಅವರ ಅಂತ್ಯಸಂಸ್ಕಾರಕ್ಕೆ ಮನೆಯವರು ಸ್ಮಶಾನಕ್ಕೆ ತೆರಳಿದ್ದರು. ಮನೆಯಲ್ಲಿದ್ದ ಗ್ಯಾಸ್‍ನಿಂದ ಅನಿಲ ಸೋರಿಕೆಯಾಗಿ ಆಕಸ್ಮಿಕ ಬೆಂಕಿ ತಗುಲಿದೆ. ಸಿಲಿಂಡರ್ ಬ್ಲಾಸ್ಟ್ ಆಗಿ ಮನೆ, ಮನೆ ಸಾಮಾನು, ಕೊಟ್ಟಿಗೆ, ಹಸು, ಕುರಿ ಎಲ್ಲವೂ ಬೆಂಕಿಗಾಹುತಿಯಾಗಿದೆ. ಕುಟುಂಬಸ್ಥರ ನೋವಿನ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು