1:47 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ವಿಧಿಯ ಕ್ರೂರ ಆಟ: ಮನೆ ಯಜಮಾನನ ಅಂತ್ಯ ಸಂಸ್ಕಾರ ವೇಳೆ ಹೊತ್ತಿ ಉರಿದ ಮನೆ; ಸೊತ್ತು ನಾಶ, ಹಸು- ಕುರಿಗಳ ಜೀವಂತ ದಹನ

01/08/2023, 17:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಿಯ ಕ್ರೂರತ್ವಕ್ಕೆ ಕಾಫಿನಾಡ ಈ ಘಟನೆ ಜೀವಂತ ಸಾಕ್ಷಿಯಾಗಿದೆ. ಮನೆ ಮಾಲೀಕನ ಅಂತ್ಯ ಸಂಸ್ಕಾರಕ್ಕೆ ಹೋದಾಗ ಮನೆ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ.
ಮನೆ ಸುಟ್ಟು ಕರಕಲಾಗಿ, ಕೊಟ್ಟಿಗೆಯಲ್ಲಿದ್ದ ರಾಸುಗಳ ಸಜೀವ ದಹನವಾಗಿದೆ.


ಮನೆ ಮಾಲೀಕ ಹನುಮಂತಪ್ಪ ಮರಣ ಹೊಂದಿದ್ದರು. ಅವರ ಅಂತ್ಯಸಂಸ್ಕಾರಕ್ಕೆ ಮನೆಯವರು ಸ್ಮಶಾನಕ್ಕೆ ತೆರಳಿದ್ದರು. ಮನೆಯಲ್ಲಿದ್ದ ಗ್ಯಾಸ್‍ನಿಂದ ಅನಿಲ ಸೋರಿಕೆಯಾಗಿ ಆಕಸ್ಮಿಕ ಬೆಂಕಿ ತಗುಲಿದೆ. ಸಿಲಿಂಡರ್ ಬ್ಲಾಸ್ಟ್ ಆಗಿ ಮನೆ, ಮನೆ ಸಾಮಾನು, ಕೊಟ್ಟಿಗೆ, ಹಸು, ಕುರಿ ಎಲ್ಲವೂ ಬೆಂಕಿಗಾಹುತಿಯಾಗಿದೆ. ಕುಟುಂಬಸ್ಥರ ನೋವಿನ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು