6:08 PM Friday6 - June 2025
ಬ್ರೇಕಿಂಗ್ ನ್ಯೂಸ್
Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ…

ಇತ್ತೀಚಿನ ಸುದ್ದಿ

ವಿದ್ವತ್ ಪದವಿಪೂರ್ವ ಕಾಲೇಜು: ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಸೆ.22ರಂದು ಪರೀಕ್ಷಾ ಕಾರ್ಯಾಗಾರ

21/09/2024, 22:55

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನೆನಪಿನ ಶಕ್ತಿ ವೃದ್ಧಿಯ ಬಗ್ಗೆ ವಿಸ್ತ್ರುತ ಮಾಹಿತಿಯ ಓರಿಯಂಟೇಷನ್ ಕಾರ್ಯಕ್ರಮ ಇದೇ ಸಪ್ಟೆಂಬರ್ 22ರ ಭಾನುವಾರ ಬೆಳಿಗ್ಗೆ 11:30 ಕ್ಕೆ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನಲ್ಲಿ ನಡೆಯಲಿದೆ.
ಈ ಓರಿಯಂಟೇಷನ್ ನಲ್ಲಿ ನೀಟ್, ಜೆಇಇ, ಸಿಯುಇಟಿ (CUET),ಐಸಿಎಆರ್ (ICAR) ಸಿಯಿಟಿ (CET), ಹೋಟೆಲ್ ಮ್ಯಾನೆಜ್ಮೆಂಟ್, ಪ್ಯಾರಾ- ಮೆಡಿಕಲ್, ಎನ್ ಡಿ ಎ (NDA ), ಹೀಗೆ ಹತ್ತು ಹಲವು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು, ಅದು ಅಲ್ಲದೆ ಈ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹಾಗೂ ವಿದ್ಯಾರ್ಥಿ ವೇತನಗಳ ಬಗ್ಗೆಯೂ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು.
ದ್ವಿತಿಯ ಪಿಯು ವಿಜ್ಞಾನ ವಿದ್ಯಾರ್ಥಿಗಳು ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನಿಖರ ಫಲಿತಾಂಶಕ್ಕಾಗಿ ನೆನಪಿನ ಶಕ್ತಿಯ ವೃದ್ಧಿ ಹೇಗೆ ಮಾಡಿಕೊಳ್ಳಬೇಕೆಂಬ ಬಗ್ಗೆ ಹೆಸರಾಂತ ಆಪ್ತ ಸಮಾಲೋಚನ ತಜ್ಞ ಗಂಗಾಧರ ಇ. ಮಂಡಗಳಲೆ ಯವರು ತರಬೇತಿ ನೀಡಲಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳ ಹೆಸರಾಂತ ತರಬೇತಿದಾರರು ಹಾಗೂ ವಿಷಯ ತಜ್ಞರಾದ ಪ್ರತಾಪ್ ದೊಡ್ಡಮನೆ ಯವರು ಮಾಹಿತಿ ನಿಡಲಿದ್ದಾರೆ. ಈ ಕಾರ್ಯಾಗಾರ ಸಂಪೂರ್ಣ ಉಚಿತವಾಗಿದ್ದು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿ ಹಾಗೂ ಅವರ ಪೋಷಕರು ಇದರಲ್ಲಿ ಭಾಗಿಯಾಗಿ ಇದರ ಸಂಪೂರ್ಣ ಪ್ರಯೋಜನ ಪಡೆಯಬಹುದು ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಕಾಶಿನಾಥ್ ಎಂ.ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರಿಗೆ ಸಂಪರ್ಕಿಸಿ

7618718791, 7618718792

ಇತ್ತೀಚಿನ ಸುದ್ದಿ

ಜಾಹೀರಾತು