11:07 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ವಿದ್ವತ್ ಪದವಿಪೂರ್ವ ಕಾಲೇಜು: ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಸೆ.22ರಂದು ಪರೀಕ್ಷಾ ಕಾರ್ಯಾಗಾರ

21/09/2024, 22:55

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನೆನಪಿನ ಶಕ್ತಿ ವೃದ್ಧಿಯ ಬಗ್ಗೆ ವಿಸ್ತ್ರುತ ಮಾಹಿತಿಯ ಓರಿಯಂಟೇಷನ್ ಕಾರ್ಯಕ್ರಮ ಇದೇ ಸಪ್ಟೆಂಬರ್ 22ರ ಭಾನುವಾರ ಬೆಳಿಗ್ಗೆ 11:30 ಕ್ಕೆ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನಲ್ಲಿ ನಡೆಯಲಿದೆ.
ಈ ಓರಿಯಂಟೇಷನ್ ನಲ್ಲಿ ನೀಟ್, ಜೆಇಇ, ಸಿಯುಇಟಿ (CUET),ಐಸಿಎಆರ್ (ICAR) ಸಿಯಿಟಿ (CET), ಹೋಟೆಲ್ ಮ್ಯಾನೆಜ್ಮೆಂಟ್, ಪ್ಯಾರಾ- ಮೆಡಿಕಲ್, ಎನ್ ಡಿ ಎ (NDA ), ಹೀಗೆ ಹತ್ತು ಹಲವು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು, ಅದು ಅಲ್ಲದೆ ಈ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹಾಗೂ ವಿದ್ಯಾರ್ಥಿ ವೇತನಗಳ ಬಗ್ಗೆಯೂ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು.
ದ್ವಿತಿಯ ಪಿಯು ವಿಜ್ಞಾನ ವಿದ್ಯಾರ್ಥಿಗಳು ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನಿಖರ ಫಲಿತಾಂಶಕ್ಕಾಗಿ ನೆನಪಿನ ಶಕ್ತಿಯ ವೃದ್ಧಿ ಹೇಗೆ ಮಾಡಿಕೊಳ್ಳಬೇಕೆಂಬ ಬಗ್ಗೆ ಹೆಸರಾಂತ ಆಪ್ತ ಸಮಾಲೋಚನ ತಜ್ಞ ಗಂಗಾಧರ ಇ. ಮಂಡಗಳಲೆ ಯವರು ತರಬೇತಿ ನೀಡಲಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳ ಹೆಸರಾಂತ ತರಬೇತಿದಾರರು ಹಾಗೂ ವಿಷಯ ತಜ್ಞರಾದ ಪ್ರತಾಪ್ ದೊಡ್ಡಮನೆ ಯವರು ಮಾಹಿತಿ ನಿಡಲಿದ್ದಾರೆ. ಈ ಕಾರ್ಯಾಗಾರ ಸಂಪೂರ್ಣ ಉಚಿತವಾಗಿದ್ದು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿ ಹಾಗೂ ಅವರ ಪೋಷಕರು ಇದರಲ್ಲಿ ಭಾಗಿಯಾಗಿ ಇದರ ಸಂಪೂರ್ಣ ಪ್ರಯೋಜನ ಪಡೆಯಬಹುದು ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಕಾಶಿನಾಥ್ ಎಂ.ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರಿಗೆ ಸಂಪರ್ಕಿಸಿ

7618718791, 7618718792

ಇತ್ತೀಚಿನ ಸುದ್ದಿ

ಜಾಹೀರಾತು