11:02 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿದ್ಯಾಭ್ಯಾಸದ ಜತೆಗೆ ಮಕ್ಕಳ ಹವ್ಯಾಸ ಗುರುತಿಸಿ ಸೃಜನಶೀಲತೆಗೆ ವೇದಿಕೆ ಕಲ್ಪಿಸುವ ಅಗತ್ಯವಿದೆ: ಡಾ. ಶೆಟ್ಟಿಗಾರ್

23/11/2021, 09:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಜೊತೆಗೆ ಅವರ ಹವ್ಯಾಸಗಳನ್ನು ಗುರುತಿಸಿ ಮಕ್ಕಳ ಸೃಜನಶೀಲತೆಗೆ ವೇದಿಕೆ ಕಲ್ಪಿಸುವ ಅಗತ್ಯವಿದೆ ಎಂದು ಡಾ.ಎಸ್.ಪಿ. ಪದ್ಮಾನಾಭ್ ಶೆಟ್ಟಿಗಾರ್ ಹೇಳಿದರು.

ಬಣಕಲ್‌ನಲ್ಲಿ ಸೋಮವಾರ ಸ್ಯಾಷ್ ದಿ ಸ್ಟೆöಟಿಲ್ ಡ್ಯಾನ್ಸ್ ಕ್ಲಾಸ್ ಅಂಡ್ ಎಎಸ್‌ಎನ್ ಮ್ಯೂಸಿಕ್ ಸ್ಟುಡಿಯೋ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು, ನೃತ್ಯ, ಸಂಗೀತ ಮುಂತಾದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಾಗವರ ವ್ಯಕ್ತಿತ್ವ ಸೃಜನಾತ್ಮಕವಾಗಿ ರೂಪುಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಪೋಷಕರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕಿದೆ ಎಂದರು.

ಜೆಸಿಐ ನೂತನ ಅಧ್ಯಕ್ಷರಾದ ವಿದ್ಯಾರಾಜು ಮಾತನಾಡಿ, ಮಕ್ಕಳು ನೃತ್ಯ ಮುಂತಾದ ಕಲಾ ಪ್ರಕಾರಗಳಲ್ಲಿ ತೊಡಗಿಕೊಂಡಾಗ ಅಪಾರ ಆತ್ಮವಿಶ್ವಾಸವನ್ನು ಪಡೆಯುವ ಜೊತೆಗೆ ಲವಲವಿಕೆಯಿಂದ ಇರುತ್ತಾರೆ. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೃತ್ಯ ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ನೃತ್ಯಶಾಲೆಯ ಶಿಕ್ಷಕ ಅಜಿತ್ ಕೆವಿಯಾರ್, ಬಿಎಸ್‌ಪಿ ಮುಖಂಡರಾದ ಜಾಕೀರ್ ಹುಸೇನ್, ಶ್ರೀಕಾಂತ್,ಮಾಸ್ಟರ್ ಪ್ರಸಾದ್ ಅಮೀನ್, ಪಿಡಿಓ ಯತೀಶ್, ಗಾಯಕ ರವೀಂದ್ರ ಬಕ್ಕಿ, ವಿರೂಪಾಕ್ಷ, ಜಯಪ್ರಕಾಶ್ ಕಡುವಳ್ಳಿ, ಬಣಕಲ್ ಕಸಾಪ ಪೂರ್ವಾದ್ಯಕ್ಷ ವಸಂತ್ ಹಾರ್‌ಗೋಡು,  ಶಿಕ್ಷಕರಾದ ನಾಗರಾಜ್, ಲಿಂಗರಾಜ್, ಭಕ್ತೇಶ್, ನಿರೂಪಕರಾದ ಶಂಕರ್, ಎಂ.ಎಸ್.ನಾಗರಾಜ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು