ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ
06/03/2026, 12:10
ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷವಾದ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಯೋಜನೆಯನ್ನು ಘೋಷಿಸಿದ್ದಾರೆ.
ಈ ಯೋಜನೆಯಡಿ ಧಾರವಾಡ ಜಿಲ್ಲೆಗೆ ಪ್ರಮುಖ ಸ್ಥಾನ ನೀಡಲಾಗಿದೆ. ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್: ಶಿಕ್ಷಣಕ್ಕಾಗಿ ಬೇರೆ ಊರುಗಳಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಪೌಷ್ಟಿಕ ಮತ್ತು ರಿಯಾಯಿತಿ ದರದ ಊಟ ನೀಡಲು ಪ್ರಮುಖ ಶೈಕ್ಷಣಿಕ ಕೇಂದ್ರಗಳಲ್ಲಿ ಈ ಕ್ಯಾಂಟೀನ್ಗಳನ್ನು ಆರಂಭಿಸಲಾಗುತ್ತಿದೆ.
*ಧಾರವಾಡಕ್ಕೆ 4 ಕ್ಯಾಂಟೀನ್:ವಿದ್ಯಾಕಾಶಿ ಎಂದೇ ಕರೆಯಲ್ಪಡುವ ಧಾರವಾಡದಲ್ಲಿ ಒಟ್ಟು 4 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ಗಳನ್ನು ಸ್ಥಾಪಿಸಲು ಸಿಎಂ ಅನುಮೋದನೆ ನೀಡಿದ್ದಾರೆ. ಧಾರವಾಡದ ಪ್ರಮುಖ ಕಾಲೇಜುಗಳು ಅಥವಾ ವಿಶ್ವವಿದ್ಯಾಲಯಗಳ ಆವರಣದ ಹತ್ತಿರ ಈ ಕ್ಯಾಂಟೀನ್ಗಳು ತಲೆಯೆತ್ತಲಿವೆ.
ದರ: ಸಾಮಾನ್ಯ ಇಂದಿರಾ ಕ್ಯಾಂಟೀನ್ಗಳಂತೆಯೇ ಇಲ್ಲಿಯೂ ಸಹ ಅತ್ಯಂತ ಕಡಿಮೆ ದರದಲ್ಲಿ (ಅಂದಾಜು 5 ರಿಂದ 10 ರೂ.) ತಿಂಡಿ ಮತ್ತು ಊಟ ಲಭ್ಯವಿರಲಿದೆ.ಉದ್ದೇಶ: ಪಿಜಿ (PG) ಅಥವಾ ಹಾಸ್ಟೆಲ್ಗಳಲ್ಲಿ ಇದ್ದುಕೊಂಡು ಓದುವ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗದಂತೆ ಗುಣಮಟ್ಟದ ಆಹಾರ ಒದಗಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.












