12:58 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

06/03/2026, 12:10

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷವಾದ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಯೋಜನೆಯನ್ನು ಘೋಷಿಸಿದ್ದಾರೆ.
ಈ ಯೋಜನೆಯಡಿ ಧಾರವಾಡ ಜಿಲ್ಲೆಗೆ ಪ್ರಮುಖ ಸ್ಥಾನ ನೀಡಲಾಗಿದೆ. ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್: ಶಿಕ್ಷಣಕ್ಕಾಗಿ ಬೇರೆ ಊರುಗಳಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಪೌಷ್ಟಿಕ ಮತ್ತು ರಿಯಾಯಿತಿ ದರದ ಊಟ ನೀಡಲು ಪ್ರಮುಖ ಶೈಕ್ಷಣಿಕ ಕೇಂದ್ರಗಳಲ್ಲಿ ಈ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುತ್ತಿದೆ.

*ಧಾರವಾಡಕ್ಕೆ 4 ಕ್ಯಾಂಟೀನ್:ವಿದ್ಯಾಕಾಶಿ ಎಂದೇ ಕರೆಯಲ್ಪಡುವ ಧಾರವಾಡದಲ್ಲಿ ಒಟ್ಟು 4 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ಸಿಎಂ ಅನುಮೋದನೆ ನೀಡಿದ್ದಾರೆ. ಧಾರವಾಡದ ಪ್ರಮುಖ ಕಾಲೇಜುಗಳು ಅಥವಾ ವಿಶ್ವವಿದ್ಯಾಲಯಗಳ ಆವರಣದ ಹತ್ತಿರ ಈ ಕ್ಯಾಂಟೀನ್‌ಗಳು ತಲೆಯೆತ್ತಲಿವೆ.
ದರ: ಸಾಮಾನ್ಯ ಇಂದಿರಾ ಕ್ಯಾಂಟೀನ್‌ಗಳಂತೆಯೇ ಇಲ್ಲಿಯೂ ಸಹ ಅತ್ಯಂತ ಕಡಿಮೆ ದರದಲ್ಲಿ (ಅಂದಾಜು 5 ರಿಂದ 10 ರೂ.) ತಿಂಡಿ ಮತ್ತು ಊಟ ಲಭ್ಯವಿರಲಿದೆ.ಉದ್ದೇಶ: ಪಿಜಿ (PG) ಅಥವಾ ಹಾಸ್ಟೆಲ್‌ಗಳಲ್ಲಿ ಇದ್ದುಕೊಂಡು ಓದುವ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗದಂತೆ ಗುಣಮಟ್ಟದ ಆಹಾರ ಒದಗಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು