7:39 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ, ಅಂಕ ಪಟ್ಟಿ ಲೇಖನಿ, ನೂತನ ವರ್ಷದ ಕ್ಯಾಲೆಂಡರ್ ವಿತರಣೆ

24/12/2024, 22:12

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶಾಲೆಗಾಗಿ ನಾವು ಇದ್ದೇವೆ, ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರಗತಿಯತ್ತ ಕೊಂಡೊಯ್ಯುವುದು ಶಿಕ್ಷಕರ ಜವಾಬ್ದಾರಿ ಎಂದು ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮುಜೀದ್ ಹೇಳಿದರು.
ಪಟ್ಟಣದ ಜಡ್.ಹೆಚ್.ಮೊಹುಲ್ಲಾ ದ ಸರ್ಕಾರಿ
ಉರ್ದು ಹಾಗೂ ಇಂಗ್ಲೀಷ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ ಹಾಗೂ ಅಂಕ ಪಟ್ಟಿ ಲೇಖನಿ ಮತ್ತು ನೂತನ ವರ್ಷದ ಕ್ಯಾಲೆಂಡರ್ ವಿತರಿಸಿ ಮಾತನಾಡಿದರು.
ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದ್ದು, ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ಹೇಳಿಕೊಡಲಾಗುತ್ತಿದ್ದು, ವಿದ್ಯಾರ್ಥಿಗಳ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಖಜಾಂಚಿ ಎ.ಟಿ.ಎಸ್. ರಿಜ್ವಾನ್ ಮಾತನಾಡಿ ಈ ಶಾಲೆಯಲ್ಲಿ ೧೭೫ ವಿದ್ಯಾರ್ಥಿಗಳು ಇದ್ದು ಶಾಲಾ ಕೊಠಡಿಗಳ ಕೊರತೆ ಇದ್ದು, ಈ ಸಂಬಂದ ಶಿಕ್ಷಣ ಸಚಿವರಿಗೆ ಕೊಠಡಿಗಳನ್ನು ಸರ್ಕಾರದಿಂದ ನಿರ್ಮಿಸಿ ಕೊಡಲು ಅಹವಾಲನ್ನು ನೀಡಿದ್ದೇನೆ ಎಂದು ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳ ಪರಿಶೀಲಿಸಿ ಶಾಲೆಗೆ ಶೈಕ್ಷಣಿಕ ಮುನ್ನೆಡಿಸಿಕೊಡಬೇಕು ಎಂದು ಮನವಿ ಮಾಡಿದರು.
ಉಪಾಧ್ಯಕ್ಷ ಇಲಿಯಾಜ್ ಪಾಷ, ಸಂಘನಾ ಕಾರ್ಯದರ್ಶಿ ಇಂತಿಯಾಜ್, ಕಾರ್ಯದರ್ಶಿ ಅಕ್ರಂಪಾಷ, ಸದಸ್ಯರಾದ ಹಿದಾಯುತುಲ್ಲಾ ಖಾನ್, ಅಲ್ಲಾಬಕಷ್, ಎಸ್‌ಡಿಎಂಸಿ ಅಧ್ಯಕ್ಷ ಹಿದಾಯುತುಲ್ಲಾ ಖಾನ್, ಉಪಾಧ್ಯಕ್ಷ ಸಫೀನಾ, ಮುಖ್ಯ ಶಿಕ್ಷಕ ಮಹ್ಮದ್ ಸಾಧಿಕ್, ಶಿಕ್ಷಕರಾದ ರಿಹಾನಖಾನಮ್, ಅಸ್ಮಸುಲ್ತಾನ , ಭಾರತಮ್ಮ, ನುಸ್ರಕ್ ಅಮ್ಮಾಜಾನ್, ಗುಲ್ ಅಬ್ ಷ, ಕುಬ್ರಾಐಮನ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು