9:42 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ, ಅಂಕ ಪಟ್ಟಿ ಲೇಖನಿ, ನೂತನ ವರ್ಷದ ಕ್ಯಾಲೆಂಡರ್ ವಿತರಣೆ

24/12/2024, 22:12

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶಾಲೆಗಾಗಿ ನಾವು ಇದ್ದೇವೆ, ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರಗತಿಯತ್ತ ಕೊಂಡೊಯ್ಯುವುದು ಶಿಕ್ಷಕರ ಜವಾಬ್ದಾರಿ ಎಂದು ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮುಜೀದ್ ಹೇಳಿದರು.
ಪಟ್ಟಣದ ಜಡ್.ಹೆಚ್.ಮೊಹುಲ್ಲಾ ದ ಸರ್ಕಾರಿ
ಉರ್ದು ಹಾಗೂ ಇಂಗ್ಲೀಷ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ ಹಾಗೂ ಅಂಕ ಪಟ್ಟಿ ಲೇಖನಿ ಮತ್ತು ನೂತನ ವರ್ಷದ ಕ್ಯಾಲೆಂಡರ್ ವಿತರಿಸಿ ಮಾತನಾಡಿದರು.
ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದ್ದು, ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ಹೇಳಿಕೊಡಲಾಗುತ್ತಿದ್ದು, ವಿದ್ಯಾರ್ಥಿಗಳ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಖಜಾಂಚಿ ಎ.ಟಿ.ಎಸ್. ರಿಜ್ವಾನ್ ಮಾತನಾಡಿ ಈ ಶಾಲೆಯಲ್ಲಿ ೧೭೫ ವಿದ್ಯಾರ್ಥಿಗಳು ಇದ್ದು ಶಾಲಾ ಕೊಠಡಿಗಳ ಕೊರತೆ ಇದ್ದು, ಈ ಸಂಬಂದ ಶಿಕ್ಷಣ ಸಚಿವರಿಗೆ ಕೊಠಡಿಗಳನ್ನು ಸರ್ಕಾರದಿಂದ ನಿರ್ಮಿಸಿ ಕೊಡಲು ಅಹವಾಲನ್ನು ನೀಡಿದ್ದೇನೆ ಎಂದು ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳ ಪರಿಶೀಲಿಸಿ ಶಾಲೆಗೆ ಶೈಕ್ಷಣಿಕ ಮುನ್ನೆಡಿಸಿಕೊಡಬೇಕು ಎಂದು ಮನವಿ ಮಾಡಿದರು.
ಉಪಾಧ್ಯಕ್ಷ ಇಲಿಯಾಜ್ ಪಾಷ, ಸಂಘನಾ ಕಾರ್ಯದರ್ಶಿ ಇಂತಿಯಾಜ್, ಕಾರ್ಯದರ್ಶಿ ಅಕ್ರಂಪಾಷ, ಸದಸ್ಯರಾದ ಹಿದಾಯುತುಲ್ಲಾ ಖಾನ್, ಅಲ್ಲಾಬಕಷ್, ಎಸ್‌ಡಿಎಂಸಿ ಅಧ್ಯಕ್ಷ ಹಿದಾಯುತುಲ್ಲಾ ಖಾನ್, ಉಪಾಧ್ಯಕ್ಷ ಸಫೀನಾ, ಮುಖ್ಯ ಶಿಕ್ಷಕ ಮಹ್ಮದ್ ಸಾಧಿಕ್, ಶಿಕ್ಷಕರಾದ ರಿಹಾನಖಾನಮ್, ಅಸ್ಮಸುಲ್ತಾನ , ಭಾರತಮ್ಮ, ನುಸ್ರಕ್ ಅಮ್ಮಾಜಾನ್, ಗುಲ್ ಅಬ್ ಷ, ಕುಬ್ರಾಐಮನ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು