8:30 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ, ಅಂಕ ಪಟ್ಟಿ ಲೇಖನಿ, ನೂತನ ವರ್ಷದ ಕ್ಯಾಲೆಂಡರ್ ವಿತರಣೆ

24/12/2024, 22:12

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶಾಲೆಗಾಗಿ ನಾವು ಇದ್ದೇವೆ, ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರಗತಿಯತ್ತ ಕೊಂಡೊಯ್ಯುವುದು ಶಿಕ್ಷಕರ ಜವಾಬ್ದಾರಿ ಎಂದು ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮುಜೀದ್ ಹೇಳಿದರು.
ಪಟ್ಟಣದ ಜಡ್.ಹೆಚ್.ಮೊಹುಲ್ಲಾ ದ ಸರ್ಕಾರಿ
ಉರ್ದು ಹಾಗೂ ಇಂಗ್ಲೀಷ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ ಹಾಗೂ ಅಂಕ ಪಟ್ಟಿ ಲೇಖನಿ ಮತ್ತು ನೂತನ ವರ್ಷದ ಕ್ಯಾಲೆಂಡರ್ ವಿತರಿಸಿ ಮಾತನಾಡಿದರು.
ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದ್ದು, ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ಹೇಳಿಕೊಡಲಾಗುತ್ತಿದ್ದು, ವಿದ್ಯಾರ್ಥಿಗಳ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಖಜಾಂಚಿ ಎ.ಟಿ.ಎಸ್. ರಿಜ್ವಾನ್ ಮಾತನಾಡಿ ಈ ಶಾಲೆಯಲ್ಲಿ ೧೭೫ ವಿದ್ಯಾರ್ಥಿಗಳು ಇದ್ದು ಶಾಲಾ ಕೊಠಡಿಗಳ ಕೊರತೆ ಇದ್ದು, ಈ ಸಂಬಂದ ಶಿಕ್ಷಣ ಸಚಿವರಿಗೆ ಕೊಠಡಿಗಳನ್ನು ಸರ್ಕಾರದಿಂದ ನಿರ್ಮಿಸಿ ಕೊಡಲು ಅಹವಾಲನ್ನು ನೀಡಿದ್ದೇನೆ ಎಂದು ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳ ಪರಿಶೀಲಿಸಿ ಶಾಲೆಗೆ ಶೈಕ್ಷಣಿಕ ಮುನ್ನೆಡಿಸಿಕೊಡಬೇಕು ಎಂದು ಮನವಿ ಮಾಡಿದರು.
ಉಪಾಧ್ಯಕ್ಷ ಇಲಿಯಾಜ್ ಪಾಷ, ಸಂಘನಾ ಕಾರ್ಯದರ್ಶಿ ಇಂತಿಯಾಜ್, ಕಾರ್ಯದರ್ಶಿ ಅಕ್ರಂಪಾಷ, ಸದಸ್ಯರಾದ ಹಿದಾಯುತುಲ್ಲಾ ಖಾನ್, ಅಲ್ಲಾಬಕಷ್, ಎಸ್‌ಡಿಎಂಸಿ ಅಧ್ಯಕ್ಷ ಹಿದಾಯುತುಲ್ಲಾ ಖಾನ್, ಉಪಾಧ್ಯಕ್ಷ ಸಫೀನಾ, ಮುಖ್ಯ ಶಿಕ್ಷಕ ಮಹ್ಮದ್ ಸಾಧಿಕ್, ಶಿಕ್ಷಕರಾದ ರಿಹಾನಖಾನಮ್, ಅಸ್ಮಸುಲ್ತಾನ , ಭಾರತಮ್ಮ, ನುಸ್ರಕ್ ಅಮ್ಮಾಜಾನ್, ಗುಲ್ ಅಬ್ ಷ, ಕುಬ್ರಾಐಮನ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು