1:49 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ, ಅಂಕ ಪಟ್ಟಿ ಲೇಖನಿ, ನೂತನ ವರ್ಷದ ಕ್ಯಾಲೆಂಡರ್ ವಿತರಣೆ

24/12/2024, 22:12

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶಾಲೆಗಾಗಿ ನಾವು ಇದ್ದೇವೆ, ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರಗತಿಯತ್ತ ಕೊಂಡೊಯ್ಯುವುದು ಶಿಕ್ಷಕರ ಜವಾಬ್ದಾರಿ ಎಂದು ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮುಜೀದ್ ಹೇಳಿದರು.
ಪಟ್ಟಣದ ಜಡ್.ಹೆಚ್.ಮೊಹುಲ್ಲಾ ದ ಸರ್ಕಾರಿ
ಉರ್ದು ಹಾಗೂ ಇಂಗ್ಲೀಷ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ ಹಾಗೂ ಅಂಕ ಪಟ್ಟಿ ಲೇಖನಿ ಮತ್ತು ನೂತನ ವರ್ಷದ ಕ್ಯಾಲೆಂಡರ್ ವಿತರಿಸಿ ಮಾತನಾಡಿದರು.
ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದ್ದು, ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ಹೇಳಿಕೊಡಲಾಗುತ್ತಿದ್ದು, ವಿದ್ಯಾರ್ಥಿಗಳ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಖಜಾಂಚಿ ಎ.ಟಿ.ಎಸ್. ರಿಜ್ವಾನ್ ಮಾತನಾಡಿ ಈ ಶಾಲೆಯಲ್ಲಿ ೧೭೫ ವಿದ್ಯಾರ್ಥಿಗಳು ಇದ್ದು ಶಾಲಾ ಕೊಠಡಿಗಳ ಕೊರತೆ ಇದ್ದು, ಈ ಸಂಬಂದ ಶಿಕ್ಷಣ ಸಚಿವರಿಗೆ ಕೊಠಡಿಗಳನ್ನು ಸರ್ಕಾರದಿಂದ ನಿರ್ಮಿಸಿ ಕೊಡಲು ಅಹವಾಲನ್ನು ನೀಡಿದ್ದೇನೆ ಎಂದು ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳ ಪರಿಶೀಲಿಸಿ ಶಾಲೆಗೆ ಶೈಕ್ಷಣಿಕ ಮುನ್ನೆಡಿಸಿಕೊಡಬೇಕು ಎಂದು ಮನವಿ ಮಾಡಿದರು.
ಉಪಾಧ್ಯಕ್ಷ ಇಲಿಯಾಜ್ ಪಾಷ, ಸಂಘನಾ ಕಾರ್ಯದರ್ಶಿ ಇಂತಿಯಾಜ್, ಕಾರ್ಯದರ್ಶಿ ಅಕ್ರಂಪಾಷ, ಸದಸ್ಯರಾದ ಹಿದಾಯುತುಲ್ಲಾ ಖಾನ್, ಅಲ್ಲಾಬಕಷ್, ಎಸ್‌ಡಿಎಂಸಿ ಅಧ್ಯಕ್ಷ ಹಿದಾಯುತುಲ್ಲಾ ಖಾನ್, ಉಪಾಧ್ಯಕ್ಷ ಸಫೀನಾ, ಮುಖ್ಯ ಶಿಕ್ಷಕ ಮಹ್ಮದ್ ಸಾಧಿಕ್, ಶಿಕ್ಷಕರಾದ ರಿಹಾನಖಾನಮ್, ಅಸ್ಮಸುಲ್ತಾನ , ಭಾರತಮ್ಮ, ನುಸ್ರಕ್ ಅಮ್ಮಾಜಾನ್, ಗುಲ್ ಅಬ್ ಷ, ಕುಬ್ರಾಐಮನ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು