12:02 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ, ಅಂಕ ಪಟ್ಟಿ ಲೇಖನಿ, ನೂತನ ವರ್ಷದ ಕ್ಯಾಲೆಂಡರ್ ವಿತರಣೆ

24/12/2024, 22:12

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶಾಲೆಗಾಗಿ ನಾವು ಇದ್ದೇವೆ, ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರಗತಿಯತ್ತ ಕೊಂಡೊಯ್ಯುವುದು ಶಿಕ್ಷಕರ ಜವಾಬ್ದಾರಿ ಎಂದು ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮುಜೀದ್ ಹೇಳಿದರು.
ಪಟ್ಟಣದ ಜಡ್.ಹೆಚ್.ಮೊಹುಲ್ಲಾ ದ ಸರ್ಕಾರಿ
ಉರ್ದು ಹಾಗೂ ಇಂಗ್ಲೀಷ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ ಹಾಗೂ ಅಂಕ ಪಟ್ಟಿ ಲೇಖನಿ ಮತ್ತು ನೂತನ ವರ್ಷದ ಕ್ಯಾಲೆಂಡರ್ ವಿತರಿಸಿ ಮಾತನಾಡಿದರು.
ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದ್ದು, ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ಹೇಳಿಕೊಡಲಾಗುತ್ತಿದ್ದು, ವಿದ್ಯಾರ್ಥಿಗಳ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಖಜಾಂಚಿ ಎ.ಟಿ.ಎಸ್. ರಿಜ್ವಾನ್ ಮಾತನಾಡಿ ಈ ಶಾಲೆಯಲ್ಲಿ ೧೭೫ ವಿದ್ಯಾರ್ಥಿಗಳು ಇದ್ದು ಶಾಲಾ ಕೊಠಡಿಗಳ ಕೊರತೆ ಇದ್ದು, ಈ ಸಂಬಂದ ಶಿಕ್ಷಣ ಸಚಿವರಿಗೆ ಕೊಠಡಿಗಳನ್ನು ಸರ್ಕಾರದಿಂದ ನಿರ್ಮಿಸಿ ಕೊಡಲು ಅಹವಾಲನ್ನು ನೀಡಿದ್ದೇನೆ ಎಂದು ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳ ಪರಿಶೀಲಿಸಿ ಶಾಲೆಗೆ ಶೈಕ್ಷಣಿಕ ಮುನ್ನೆಡಿಸಿಕೊಡಬೇಕು ಎಂದು ಮನವಿ ಮಾಡಿದರು.
ಉಪಾಧ್ಯಕ್ಷ ಇಲಿಯಾಜ್ ಪಾಷ, ಸಂಘನಾ ಕಾರ್ಯದರ್ಶಿ ಇಂತಿಯಾಜ್, ಕಾರ್ಯದರ್ಶಿ ಅಕ್ರಂಪಾಷ, ಸದಸ್ಯರಾದ ಹಿದಾಯುತುಲ್ಲಾ ಖಾನ್, ಅಲ್ಲಾಬಕಷ್, ಎಸ್‌ಡಿಎಂಸಿ ಅಧ್ಯಕ್ಷ ಹಿದಾಯುತುಲ್ಲಾ ಖಾನ್, ಉಪಾಧ್ಯಕ್ಷ ಸಫೀನಾ, ಮುಖ್ಯ ಶಿಕ್ಷಕ ಮಹ್ಮದ್ ಸಾಧಿಕ್, ಶಿಕ್ಷಕರಾದ ರಿಹಾನಖಾನಮ್, ಅಸ್ಮಸುಲ್ತಾನ , ಭಾರತಮ್ಮ, ನುಸ್ರಕ್ ಅಮ್ಮಾಜಾನ್, ಗುಲ್ ಅಬ್ ಷ, ಕುಬ್ರಾಐಮನ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು