4:41 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ರಾಷ್ಟ್ರೀಯ ಸೇವಾ ಯೋಜನೆ ಪೂರಕ: ಡಾ. ನಾಗರತ್ನ ಕೆ.ಎ

10/12/2021, 07:58

ಮಂಗಳೂರು(reporterkarnataka.com): ಪದುವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾಯೋಜನೆ ಘಟಕ ಹಾಗೂ ಉದ್ಘಾಟನಾ ಸಮಾರಂಭ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸಮಾಜದಲ್ಲಿ ಹೇಗೆ ಬದುಕ ಬೇಕು ಅನ್ನುವುದನ್ನು ರಾ.ಸೆ.ಯೋ. ತಿಳಿಸಿಕೊಡುತ್ತದೆ. 
ನಿಮ್ಮ ನಿಮ್ಮ ಮನೆಗಳಲ್ಲಿ ಸಸಿ ನೆಡುವ ಕಾರ್ಯ ಮಾಡಿ. ಅದು ಕೂಡ ನೀವು  ಸಮಾಜಕ್ಕೆ ಕೊಡುವ ಕೊಡುಗೆಯಾಗಿದೆ. ನಿಮ್ಮ ಪರಿಸರ ಸ್ವಚ್ಛಗೊಳಿಸಿ , ಅದೇ ಸೇವೆ ಎಂದು ಅವರ ಹೇಳಿದರು.ನಂತರ ರಾ.ಸೆ.ಯೋ ಪ್ರತಿಜ್ಞಾ ವಿಧಿ ಬೋಧಿಸಿದರು.




ಇನೋರ್ವ ಅತಿಥಿ ಆಂಕರ್ ವಿ.ಜೆ.ಡಿಕ್ಷನ್ ಮಾತನಾಡಿ, ರಾ. ಸೆ.ಯೋ ಒಂದು  ಅದ್ಬುತ ವೇದಿಕೆ.ಇದನ್ನು ಕಾಲೇಜು ದಿನಗಳಲ್ಲಿ ಉತ್ತಮವಾಗಿ ಬಳಸಿಕೊಳ್ಳಿ. ಕಾಲೇಜು ಜೀವನವನ್ನು  ಮನೋರಂಜಿಸುವ ಜತೆಗೆ ಜವಾಬ್ದಾರಿಯುತವಾಗಿ ಪರಿಗಣಿಸಿ ಒಳ್ಳೆಯ ಜೀವನವನ್ನು ರೂಪಿಸಿಕೊಳ್ಳಿ ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ರಂಜನ್  ವಿ. ಎನ್. ವಹಿಸಿದ್ದರು. 


ಕಾರ್ಯಕ್ರಮದಲ್ಲಿ ಕೋವಿಡ್ ವಾರ್ ರೂಮ್ ನಲ್ಲಿ ಕಾರ್ಯನಿರ್ವಹಿಸಿದ ಸ್ವಯಂ ಸೇವಕರನ್ನು ಅಭಿನಂದಿಸಲಾಯಿತು. ರಾ.ಸೆ.ಯೋ ಯೋಜನಾಧಿಕಾರಿ, ಪ್ರೊ. ರೋಶನ್ ಸಾಂತುಮೆರ್, ರಾಹುಲ್ ಮತ್ತು ರೇಷ್ಮಾ  ಉಪಸ್ಥಿತರಿದ್ದರು.




ಸ್ವಯಂ ಸೇವಕರಾದ ತನುಶ್ರೀ ನಿರೂಪಿಸಿ,ಬ್ಲಾನಿ ಡಿಸೋಜ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು