ಇತ್ತೀಚಿನ ಸುದ್ದಿ
ವಿದ್ಯಾರ್ಥಿಗಳ ತ್ರಿಬಲ್ ರೈಡ್ : ಮೀಯಪದವಿನಲ್ಲಿ ಶಾಲಾ ಬಸ್ಸಿಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು
13/01/2023, 19:04

ಕಾಸರಗೋಡು(reporterkarnataka.com) ಜಿಲ್ಲೆಯ ಮಂಜೇಶ್ವರ ಬಳಿಯ ಮೀಯಪದವು ಸಮೀಪ ಶಾಲಾ ಬಸ್ಸು ಹಾಗೂ ಬೈಕ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಮಂಜೇಶ್ವರ ಮೀಯಪದವಿನ ಮೀಂಜ ಬಾಳಿಯೂರು ಬಳಿ ಈ ದುರ್ಘಟನೆ ನಡೆದಿದೆ.
ಮಂಗಳೂರು ಶ್ರೀದೇವಿ ಹಾಗೂ ಪ್ರೇರಣ ಕಾಲೇಜು ವಿದ್ಯಾರ್ಥಿಗಳಾದ ಪ್ರಿತೇಶ್, ಅಭಿ ಹಾಗೂ ನಮಿತ್ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೀಡಾಗಿದೆ.
ಪ್ರಿತೇಶ್ ಹಾಗೂ ಅಭಿ ಇಬ್ಬರೂ ಸಾವನ್ನಪ್ಪಿದ್ದರೆ, ಇನ್ನೊಬ್ಬ ನಮಿತ್ ಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಕಾಲೇಜಿನ ಮೂವರು ವಿದ್ಯಾರ್ಥಿಗಳು ಒಂದೇ ಬೈಕಿನಲ್ಲಿ ಹೆಲ್ಮಟ್ ಕೂಡ ಧರಿಸದೇ ಅತೀ ವೇಗವಾಗಿ ರೈಡ್ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.
ಇನ್ನು ಅಪಘಾತದ ದೃಶ್ಯಗಳು ಇಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ.