7:44 AM Sunday8 - September 2024
ಬ್ರೇಕಿಂಗ್ ನ್ಯೂಸ್
ಕಲಿಯುವ ಛಲದಿಂದ ಸಂಕಲ್ಪ ಸಾಧಿಸಿದ ತನ್ವಿ!: ಕೆಳ ಮಧ್ಯಮ ಕುಟುಂಬದ ವಿದ್ಯಾರ್ಥಿನಿ ಎಂಬಿಬಿಎಸ್… ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ… ಓವರ್‌ಟೇಕ್ ವಿವಾದ: ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಬೀದಿ ಜಗಳ; ಪ್ರಕರಣ ದಾಖಲು ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು… ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಬಳ್ಳಾರಿಯಲ್ಲಿ ಸೆ.6ರಂದು ಗೋ ಬ್ಯಾಕ್ ಗವರ್ನರ್ ಚಳವಳಿ: ಕಪ್ಪುಪಟ್ಟಿ, ಬಾವುಟ ಪ್ರದರ್ಶನ ರಾಜಕೀಯ ರಣತಂತ್ರಕ್ಕೆ ಮುದುಡಿದ ಕಮಲ: ನಂಜನಗೂಡು ನಗರಸಭೆ ನೂತನ ಸಾರಥಿಗಳಾಗಿ ಕಾಂಗ್ರೆಸ್ ನ… ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಮಾಡಿ; ಸಾರ್ವಜನಿಕರಿಗೆ ಮಾರಕವಾಗುವ ಡಿಜೆ ಬೇಡ: ಡಿವೈಎಸ್’ಪಿ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳೇ, ಅಲ್ ದಿ ಬೆಸ್ಟ್: ಪರೀಕ್ಷೆಯೆಂಬ ಭಯ ಬೇಡ, ಹಬ್ಬದಂತೆ ಸಂಭ್ರಮಿಸಿ!!

23/03/2022, 09:57

ಮಾರ್ಚ್ ತಿಂಗಳು ಬರುತ್ತಿದ್ದಂತೆ ಭೂಮಿಯ ವಾತಾವರಣದಲ್ಲಿ ಬಿಸಿಯ ಕಾವು ಹೆಚ್ಚಲು ಆರಂಭವಾಗುತ್ತದೆ. ಅದೇ ರೀತಿ ಶಿಕ್ಷಣ ವ್ಯವಸ್ಥೆಯಲ್ಲಿ ಮಾರ್ಚ್ ತಿಂಗಳು ಪ್ರಾರಂಭವಾದರೆ ಪರೀಕ್ಷೆಗಳ ಪರ್ವ ಆರಂಭವಾಗುತ್ತವೆ.

ಸ್ಪರ್ಧಾತ್ಮಕ ಯುಗದಲ್ಲಿ ಪರೀಕ್ಷೆಗಳು ಅತಿ ಅನಿವಾರ್ಯವಾಗಿದೆ. ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರವಾದ ಘಟ್ಟವಾಗಿದೆ. ವಿದ್ಯಾರ್ಥಿಗಳು ಇಡೀ ಶೈಕ್ಷಣಿಕ ವರ್ಷದಲ್ಲಿ ಕಲಿತಂತಹ ವಿಷಯಗಳನ್ನು ಮೂರು ಗಂಟೆಯ ಸಮಯದಲ್ಲಿ ಒರೆ ಹಚ್ಚುವ ಸಂದರ್ಭವಾಗಿರುತ್ತದೆ.

ಪರೀಕ್ಷೆಯು ವಿದ್ಯಾರ್ಥಿಗಳ ಪ್ರತಿಭೆ ಮತ್ತು ಕಲಿಕಾ ಸಾಮರ್ಥ್ಯದ ವಿಶ್ಲೇಷಣೆಗೆ ಸಾಧನವಾಗಿದೆ ಹಾಗೂ ಮುಂದಿನ ಗುರಿಯನ್ನು ತಲುಪಲು ಬೇಕಾದ ದಾರಿಯಾಗಿರುತ್ತದೆ. ಸಾಮಾನ್ಯವಾಗಿ ವಿದ್ಯಾರ್ಥಿಗಳು ಪರೀಕ್ಷೆಯ  ಸಮಯದಲ್ಲಿ ಒತ್ತಡಕ್ಕೆ ಒಳಗಾಗುವುದು ಸಹಜ. ಶಿಕ್ಷಕರ ಮತ್ತು ಪೋಷಕರ ಸರಿಯಾದ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗುವುದನ್ನು ತಪ್ಪಿಸಬಹುದಾಗಿದೆ.

ಎಲ್ಲಾ ಹೆತ್ತವರು ತಮ್ಮ ಮಕ್ಕಳು ಉತ್ತಮ ಅಂಕ ಗಳಿಸಿ  ಜೀವನದಲ್ಲಿ ಉನ್ನತ ಸ್ಥಾನವನ್ನು ಹೊಂದಬೇಕು ಎಂದು ಬಯಸುವುದು ಸಹಜ.

ಆದರೆ ಮಕ್ಕಳ ಮೇಲೆ ಒತ್ತಡವನ್ನು ಹೇರಿದರೆ ಅದರಿಂದ ಅಡ್ಡಪರಿಣಾಮ ಆಗುವುದಂತೂ ಖಂಡಿತ.

ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲು ಪ್ರಾರಂಭದಲ್ಲಿಯೇ ಸಿದ್ಧತೆಯನ್ನು ಮಾಡಿಕೊಳ್ಳಬೇಕು.”ಯುದ್ಧ ಕಾಲೇ ಶಸ್ತ್ರಾಭ್ಯಾಸ” ಎಂಬಂತೆ ಆಗಬಾರದು.

ಹೆತ್ತವರು ವಿದ್ಯಾರ್ಥಿಗಳಿಗೆ ಓದಲು ಅನುಕೂಲಕರವಾದ ಪರಿಸರವನ್ನು ನಿರ್ಮಿಸಬೇಕು.

ಪ್ರತಿನಿತ್ಯ ಉತ್ತಮವಾದ ಆಹಾರವನ್ನು ಮಕ್ಕಳು ಸೇವಿಸುವಂತೆ ಪೋಷಕರು ನೋಡಿಕೊಳ್ಳಬೇಕು. 

ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಮಾಡಿ ಪ್ರತಿನಿತ್ಯ ಅಭ್ಯಾಸ ಮಾಡಿದರೆ ಪರೀಕ್ಷೆಯನ್ನು ಎದುರಿಸಲು ಕಷ್ಟವಾಗದು. ಸರಿಯಾದ ಸಮಯಕ್ಕೆ ನಿದ್ದೆ , ಊಟ ವಿಶ್ರಾಂತಿಯನ್ನು ಪಡೆಯಬೇಕು.ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. 

ಏಕಾಗ್ರತೆಗಾಗಿ ಸರಳ ಪ್ರಾಣಾಯಾಮ , ಧ್ಯಾನ ಯೋಗ ಮಾಡಿದರೆ ಉತ್ತಮ.

ವಿದ್ಯಾರ್ಥಿಗಳು, ಪೋಷಕರು ಸಕಾರಾತ್ಮಕ ಭಾವನೆಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಮಕ್ಕಳನ್ನುಇತರ ಮಕ್ಕಳೊಂದಿಗೆ  ಹೋಲಿಸಿಕೊಳ್ಳದೇ, ಪ್ರತಿಯೊಂದು ಮಗುವು ಅನನ್ಯ ಎಂಬ ಭಾವನೆಯನ್ನು ಬೆಳೆಸಿಕೊಳ್ಳಬೇಕು.

ಪರೀಕ್ಷಾ ಕೊಠಡಿಯಲ್ಲಿ ಪ್ರಶ್ನಾ ಪತ್ರಿಕೆ ಸಿಕ್ಕಿದ ತಕ್ಷಣ ಬರೆಯಬಾರದು. ಪ್ರಶ್ನಾ ಪತ್ರಿಕೆಯನ್ನು ಸಾವಕಾಶವಾಗಿ ಓದಿ, ಎಲ್ಲಾ ಪ್ರಶ್ನೆಗಳಿಗೆ ನಿಗದಿತ ಸಮಯದೊಳಗೆ ಅಂದವಾಗಿ ಸರಿಯಾಗಿ ಬರೆಯಲು ಪ್ರಯತ್ನಿಸಬೇಕು.

ಈ ಎಲ್ಲಾ ವಿಷಯಗಳನ್ನು ವಿದ್ಯಾರ್ಥಿಗಳು ಮನಸ್ಸಿನಲ್ಲಿಟ್ಟುಕೊಂಡು ಪರೀಕ್ಷೆಯನ್ನು ಎದುರಿಸಿದರೆ ಯಶಸ್ಸು ಮತ್ತು ಉತ್ತಮ ಅಂಕಗಳನ್ನು ಗಳಿಸುವುದರಲ್ಲಿ ಸಂಶಯವಿಲ್ಲ.

ವಿದ್ಯಾರ್ಥಿಗಳು  ಪರೀಕ್ಷೆಯನ್ನು ಶಿಕ್ಷೆ, ಮಾನಸಿಕ ಒತ್ತಡ  ಎಂದು ಭಾವಿಸದೆ ವರ್ಷಕ್ಕೊಮ್ಮೆ ಬರುವ ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಎದುರಿಸಿದರೆ ಪರೀಕ್ಷಾ ಭಯ ಹೋಗಿ   ಸಂತಸದ ವಾತಾವರಣ ನಿರ್ಮಾಣ ಆಗುವುದರಲ್ಲಿ ಸಂಶಯವಿಲ್ಲ…

✍️

ಇತ್ತೀಚಿನ ಸುದ್ದಿ

ಜಾಹೀರಾತು