3:31 AM Saturday4 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳೇ, ಅಲ್ ದಿ ಬೆಸ್ಟ್: ಪರೀಕ್ಷೆಯೆಂಬ ಭಯ ಬೇಡ, ಹಬ್ಬದಂತೆ ಸಂಭ್ರಮಿಸಿ!!

23/03/2022, 09:57

ಮಾರ್ಚ್ ತಿಂಗಳು ಬರುತ್ತಿದ್ದಂತೆ ಭೂಮಿಯ ವಾತಾವರಣದಲ್ಲಿ ಬಿಸಿಯ ಕಾವು ಹೆಚ್ಚಲು ಆರಂಭವಾಗುತ್ತದೆ. ಅದೇ ರೀತಿ ಶಿಕ್ಷಣ ವ್ಯವಸ್ಥೆಯಲ್ಲಿ ಮಾರ್ಚ್ ತಿಂಗಳು ಪ್ರಾರಂಭವಾದರೆ ಪರೀಕ್ಷೆಗಳ ಪರ್ವ ಆರಂಭವಾಗುತ್ತವೆ.

ಸ್ಪರ್ಧಾತ್ಮಕ ಯುಗದಲ್ಲಿ ಪರೀಕ್ಷೆಗಳು ಅತಿ ಅನಿವಾರ್ಯವಾಗಿದೆ. ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರವಾದ ಘಟ್ಟವಾಗಿದೆ. ವಿದ್ಯಾರ್ಥಿಗಳು ಇಡೀ ಶೈಕ್ಷಣಿಕ ವರ್ಷದಲ್ಲಿ ಕಲಿತಂತಹ ವಿಷಯಗಳನ್ನು ಮೂರು ಗಂಟೆಯ ಸಮಯದಲ್ಲಿ ಒರೆ ಹಚ್ಚುವ ಸಂದರ್ಭವಾಗಿರುತ್ತದೆ.

ಪರೀಕ್ಷೆಯು ವಿದ್ಯಾರ್ಥಿಗಳ ಪ್ರತಿಭೆ ಮತ್ತು ಕಲಿಕಾ ಸಾಮರ್ಥ್ಯದ ವಿಶ್ಲೇಷಣೆಗೆ ಸಾಧನವಾಗಿದೆ ಹಾಗೂ ಮುಂದಿನ ಗುರಿಯನ್ನು ತಲುಪಲು ಬೇಕಾದ ದಾರಿಯಾಗಿರುತ್ತದೆ. ಸಾಮಾನ್ಯವಾಗಿ ವಿದ್ಯಾರ್ಥಿಗಳು ಪರೀಕ್ಷೆಯ  ಸಮಯದಲ್ಲಿ ಒತ್ತಡಕ್ಕೆ ಒಳಗಾಗುವುದು ಸಹಜ. ಶಿಕ್ಷಕರ ಮತ್ತು ಪೋಷಕರ ಸರಿಯಾದ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗುವುದನ್ನು ತಪ್ಪಿಸಬಹುದಾಗಿದೆ.

ಎಲ್ಲಾ ಹೆತ್ತವರು ತಮ್ಮ ಮಕ್ಕಳು ಉತ್ತಮ ಅಂಕ ಗಳಿಸಿ  ಜೀವನದಲ್ಲಿ ಉನ್ನತ ಸ್ಥಾನವನ್ನು ಹೊಂದಬೇಕು ಎಂದು ಬಯಸುವುದು ಸಹಜ.

ಆದರೆ ಮಕ್ಕಳ ಮೇಲೆ ಒತ್ತಡವನ್ನು ಹೇರಿದರೆ ಅದರಿಂದ ಅಡ್ಡಪರಿಣಾಮ ಆಗುವುದಂತೂ ಖಂಡಿತ.

ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲು ಪ್ರಾರಂಭದಲ್ಲಿಯೇ ಸಿದ್ಧತೆಯನ್ನು ಮಾಡಿಕೊಳ್ಳಬೇಕು.”ಯುದ್ಧ ಕಾಲೇ ಶಸ್ತ್ರಾಭ್ಯಾಸ” ಎಂಬಂತೆ ಆಗಬಾರದು.

ಹೆತ್ತವರು ವಿದ್ಯಾರ್ಥಿಗಳಿಗೆ ಓದಲು ಅನುಕೂಲಕರವಾದ ಪರಿಸರವನ್ನು ನಿರ್ಮಿಸಬೇಕು.

ಪ್ರತಿನಿತ್ಯ ಉತ್ತಮವಾದ ಆಹಾರವನ್ನು ಮಕ್ಕಳು ಸೇವಿಸುವಂತೆ ಪೋಷಕರು ನೋಡಿಕೊಳ್ಳಬೇಕು. 

ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಮಾಡಿ ಪ್ರತಿನಿತ್ಯ ಅಭ್ಯಾಸ ಮಾಡಿದರೆ ಪರೀಕ್ಷೆಯನ್ನು ಎದುರಿಸಲು ಕಷ್ಟವಾಗದು. ಸರಿಯಾದ ಸಮಯಕ್ಕೆ ನಿದ್ದೆ , ಊಟ ವಿಶ್ರಾಂತಿಯನ್ನು ಪಡೆಯಬೇಕು.ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. 

ಏಕಾಗ್ರತೆಗಾಗಿ ಸರಳ ಪ್ರಾಣಾಯಾಮ , ಧ್ಯಾನ ಯೋಗ ಮಾಡಿದರೆ ಉತ್ತಮ.

ವಿದ್ಯಾರ್ಥಿಗಳು, ಪೋಷಕರು ಸಕಾರಾತ್ಮಕ ಭಾವನೆಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಮಕ್ಕಳನ್ನುಇತರ ಮಕ್ಕಳೊಂದಿಗೆ  ಹೋಲಿಸಿಕೊಳ್ಳದೇ, ಪ್ರತಿಯೊಂದು ಮಗುವು ಅನನ್ಯ ಎಂಬ ಭಾವನೆಯನ್ನು ಬೆಳೆಸಿಕೊಳ್ಳಬೇಕು.

ಪರೀಕ್ಷಾ ಕೊಠಡಿಯಲ್ಲಿ ಪ್ರಶ್ನಾ ಪತ್ರಿಕೆ ಸಿಕ್ಕಿದ ತಕ್ಷಣ ಬರೆಯಬಾರದು. ಪ್ರಶ್ನಾ ಪತ್ರಿಕೆಯನ್ನು ಸಾವಕಾಶವಾಗಿ ಓದಿ, ಎಲ್ಲಾ ಪ್ರಶ್ನೆಗಳಿಗೆ ನಿಗದಿತ ಸಮಯದೊಳಗೆ ಅಂದವಾಗಿ ಸರಿಯಾಗಿ ಬರೆಯಲು ಪ್ರಯತ್ನಿಸಬೇಕು.

ಈ ಎಲ್ಲಾ ವಿಷಯಗಳನ್ನು ವಿದ್ಯಾರ್ಥಿಗಳು ಮನಸ್ಸಿನಲ್ಲಿಟ್ಟುಕೊಂಡು ಪರೀಕ್ಷೆಯನ್ನು ಎದುರಿಸಿದರೆ ಯಶಸ್ಸು ಮತ್ತು ಉತ್ತಮ ಅಂಕಗಳನ್ನು ಗಳಿಸುವುದರಲ್ಲಿ ಸಂಶಯವಿಲ್ಲ.

ವಿದ್ಯಾರ್ಥಿಗಳು  ಪರೀಕ್ಷೆಯನ್ನು ಶಿಕ್ಷೆ, ಮಾನಸಿಕ ಒತ್ತಡ  ಎಂದು ಭಾವಿಸದೆ ವರ್ಷಕ್ಕೊಮ್ಮೆ ಬರುವ ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಎದುರಿಸಿದರೆ ಪರೀಕ್ಷಾ ಭಯ ಹೋಗಿ   ಸಂತಸದ ವಾತಾವರಣ ನಿರ್ಮಾಣ ಆಗುವುದರಲ್ಲಿ ಸಂಶಯವಿಲ್ಲ…

✍️

ಇತ್ತೀಚಿನ ಸುದ್ದಿ

ಜಾಹೀರಾತು