2:06 AM Saturday20 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳು ಜೀವನದಲ್ಲಿ ಆದರ್ಶಗಳನ್ನು ಪಾಲಿಸಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ: ವಿನಯ್ ಕುಮಾರ್ ಹಿರೇಮಠ

07/08/2021, 09:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ವಿದ್ಯಾನಿಕೇತನ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಾಲೇಜು ಬ್ಯಾಗ್, ನೋಟ್ಬುಕ್, ಗ್ರಂಥಾಲಯ ಪುಸ್ತಕ, ಹಾಗೂ ಅಧ್ಯಯನ ಸಾಮಗ್ರಿಯನ್ನು ವಿತರಿಸಲಾಯಿತು. ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಾಚಾರ್ಯ ವಿನಯ್ ಕುಮಾರ್ ಹಿರೇಮಠ ಅವರು, ಸಮಾಜದಲ್ಲಿ ವಿದ್ಯಾರ್ಥಿಗಳು ಮುಂದೆ ಬರಬೇಕಾದರೆ ಜೀವನದಲ್ಲಿ ಗುರಿ ಇರಬೇಕು. ನಾವು ಬದುಕಬೇಕಾದರೆ ಸಮಾಜದಲ್ಲಿ ಹೇಗಿರಬೇಕು. ಹೀಗೆ ಬದುಕಬೇಕು. ಚೆನ್ನಾಗಿ ವಿದ್ಯಾಭ್ಯಾಸ ಮಾಡುವುದರಿಂದ ಸಮಾಜದಲ್ಲಿ ಉನ್ನತ ಹುದ್ದೆಯ ಪಡೆಯಬಹುದು. ನೀವು ಉನ್ನತ ಹುದ್ದೆ ಪಡೆದಾಗ ಹಡೆದ ತಂದೆ-ತಾಯಿಗಳಿಗೂ ಮತ್ತು ನಮ್ಮ ಕಾಲೇಜಿಗೂ ಕೀರ್ತಿ ಗೌರವ ಸಲ್ಲುತ್ತದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಚೆನ್ನಾಗಿ ಓದಿನ ಕಡೆ ಗಮನಕೊಟ್ಟು ಸಮಾಜದಲ್ಲಿ ಮುಂದೆ ಬರಬೇಕು. ಸಮಾಜದಲ್ಲಿ ಒಳ್ಳೆಯವರ ಮಾರ್ಗದರ್ಶನ ಅವರ ಆದರ್ಶಗಳನ್ನು ಪಾಲಿಸಿದಾಗ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸ್ಥೆಯ  ಮಂಡಳಿಯ

ಬಸವರಾಜ ತೊಂತನಾಳ, ನಾಗರಾಜ ಶೆಟ್ಟಿ , ವಿದ್ಯಾಮನೋಹರ, ವೀರೇಶ ಗೋನಾಳ, ಶ್ರೀಧರ ಗುಡಿ, ಕಾಲೇಜಿನ ಪ್ರಾಂಶುಪಾಲರಾದ ವಿನಯಕುಮಾರ ಹಿರೇಮಠ, ಅಮರೇಶ ನಾಯಕ ಯಲ್ಲಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು