6:13 AM Sunday12 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್ ಬಂಧನಕ್ಕೆ ಪೊಲೀಸರು ವಿಫಲ; ನಿರೀಕ್ಷಣಾ ಜಾಮೀನಿಗೆ ಅರ್ಜಿ

26/10/2021, 08:20

ಮಂಗಳೂರು( reporterkarnataka.com): ವಕೀಲ ರಾಜೇಶ್ ಭಟ್ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಇಂಟರ್ನಶಿಪ್ ವಿದ್ಯಾರ್ಥಿನಿ 

ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿ ಒಂದು ವಾರ ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ವಿಫಲರಾಗಿದ್ದಾರೆ. ಈ ನಡುವೆ ಆರೋಪಿ ರಾಜೇಶ್ ಭಟ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜೇಶ್ ಭಟ್ ಅಕ್ಟೋಬರ್ 21ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೋಮವಾರ(ಅ.25) ಮೊದಲ ವಿಚಾರಣೆ ನಡೆದಿತ್ತು. 

ಉತ್ತರ ಪ್ರದೇಶ ಮೂಲದ ಕಾನೂನು ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ವರ್ಶಿಸಿದ ಹಾಗೂ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪಕ್ಕೆ ರಾಜೇಶ್ ಭಟ್ ಗುರಿಯಾಗಿದ್ದಾರೆ. ಇಂಟರ್ನಶಿಪ್ ವಿದ್ಯಾರ್ಥಿನಿಯನ್ನು ರಾತ್ರಿ 8 ಗಂಟೆ ತನಕ ಕಚೇರಿಯಲ್ಲಿ ಇರುವಂತೆ ರಾಜೇಶ್ ಭಟ್ ಸೂಚಿಸಿದ್ದರಂತೆ. ಅಷ್ಟು ಹೊತ್ತಿನವರೆಗೆ ಯಾಕೆ ನಿಲ್ಲಬೇಕೆಂದು ವಿದ್ಯಾರ್ಥಿನಿ ಪ್ರಶ್ನಿಸಿದರೆ, 8 ಗಂಟೆ ತನಕ ಎಲ್ಲರೂ ಕಚೇರಿಯಲ್ಲಿರುತ್ತಾರೆ ಎಂದು ಉತ್ತರಿಸಿದ್ದಂತೆ. ಅಂದು ರಾತ್ರಿ ರಾಜೇಶ್ ಭಟ್ ವಿದ್ಯಾರ್ಥಿನಿಯನ್ನು ತನ್ನ ಛೇಂಬರೊಳಗೆ ಕರೆಸಿ ಅಸಭ್ಯವಾಗಿ ವರ್ತಿಸಿ, ವಿದ್ಯಾರ್ಥಿನಿಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿರುವುದಾಗಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಇದಾದ ಬಳಿಕ ರಾಜೇಶ್ ಭಟ್ ಮೆಸೇಜ್ ಹಾಗೂ ಕರೆ ಮಾಡಿ ಮುಂದೆಂದೂ ಇಂತಹ ತಪ್ಪು ಮಾಡುವುದಿಲ್ಲ. ನೀನು ಮತ್ತೆ ಕಚೇರಿಗೆ ಬಾ ಎಂದು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್ ಭಟ್ ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು