1:23 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್ ಬಂಧನಕ್ಕೆ ಪೊಲೀಸರು ವಿಫಲ; ನಿರೀಕ್ಷಣಾ ಜಾಮೀನಿಗೆ ಅರ್ಜಿ

26/10/2021, 08:20

ಮಂಗಳೂರು( reporterkarnataka.com): ವಕೀಲ ರಾಜೇಶ್ ಭಟ್ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಇಂಟರ್ನಶಿಪ್ ವಿದ್ಯಾರ್ಥಿನಿ 

ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿ ಒಂದು ವಾರ ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ವಿಫಲರಾಗಿದ್ದಾರೆ. ಈ ನಡುವೆ ಆರೋಪಿ ರಾಜೇಶ್ ಭಟ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜೇಶ್ ಭಟ್ ಅಕ್ಟೋಬರ್ 21ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೋಮವಾರ(ಅ.25) ಮೊದಲ ವಿಚಾರಣೆ ನಡೆದಿತ್ತು. 

ಉತ್ತರ ಪ್ರದೇಶ ಮೂಲದ ಕಾನೂನು ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ವರ್ಶಿಸಿದ ಹಾಗೂ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪಕ್ಕೆ ರಾಜೇಶ್ ಭಟ್ ಗುರಿಯಾಗಿದ್ದಾರೆ. ಇಂಟರ್ನಶಿಪ್ ವಿದ್ಯಾರ್ಥಿನಿಯನ್ನು ರಾತ್ರಿ 8 ಗಂಟೆ ತನಕ ಕಚೇರಿಯಲ್ಲಿ ಇರುವಂತೆ ರಾಜೇಶ್ ಭಟ್ ಸೂಚಿಸಿದ್ದರಂತೆ. ಅಷ್ಟು ಹೊತ್ತಿನವರೆಗೆ ಯಾಕೆ ನಿಲ್ಲಬೇಕೆಂದು ವಿದ್ಯಾರ್ಥಿನಿ ಪ್ರಶ್ನಿಸಿದರೆ, 8 ಗಂಟೆ ತನಕ ಎಲ್ಲರೂ ಕಚೇರಿಯಲ್ಲಿರುತ್ತಾರೆ ಎಂದು ಉತ್ತರಿಸಿದ್ದಂತೆ. ಅಂದು ರಾತ್ರಿ ರಾಜೇಶ್ ಭಟ್ ವಿದ್ಯಾರ್ಥಿನಿಯನ್ನು ತನ್ನ ಛೇಂಬರೊಳಗೆ ಕರೆಸಿ ಅಸಭ್ಯವಾಗಿ ವರ್ತಿಸಿ, ವಿದ್ಯಾರ್ಥಿನಿಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿರುವುದಾಗಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಇದಾದ ಬಳಿಕ ರಾಜೇಶ್ ಭಟ್ ಮೆಸೇಜ್ ಹಾಗೂ ಕರೆ ಮಾಡಿ ಮುಂದೆಂದೂ ಇಂತಹ ತಪ್ಪು ಮಾಡುವುದಿಲ್ಲ. ನೀನು ಮತ್ತೆ ಕಚೇರಿಗೆ ಬಾ ಎಂದು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್ ಭಟ್ ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು