9:34 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್ ಬಂಧನಕ್ಕೆ ಪೊಲೀಸರು ವಿಫಲ; ನಿರೀಕ್ಷಣಾ ಜಾಮೀನಿಗೆ ಅರ್ಜಿ

26/10/2021, 08:20

ಮಂಗಳೂರು( reporterkarnataka.com): ವಕೀಲ ರಾಜೇಶ್ ಭಟ್ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಇಂಟರ್ನಶಿಪ್ ವಿದ್ಯಾರ್ಥಿನಿ 

ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿ ಒಂದು ವಾರ ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ವಿಫಲರಾಗಿದ್ದಾರೆ. ಈ ನಡುವೆ ಆರೋಪಿ ರಾಜೇಶ್ ಭಟ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜೇಶ್ ಭಟ್ ಅಕ್ಟೋಬರ್ 21ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೋಮವಾರ(ಅ.25) ಮೊದಲ ವಿಚಾರಣೆ ನಡೆದಿತ್ತು. 

ಉತ್ತರ ಪ್ರದೇಶ ಮೂಲದ ಕಾನೂನು ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ವರ್ಶಿಸಿದ ಹಾಗೂ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪಕ್ಕೆ ರಾಜೇಶ್ ಭಟ್ ಗುರಿಯಾಗಿದ್ದಾರೆ. ಇಂಟರ್ನಶಿಪ್ ವಿದ್ಯಾರ್ಥಿನಿಯನ್ನು ರಾತ್ರಿ 8 ಗಂಟೆ ತನಕ ಕಚೇರಿಯಲ್ಲಿ ಇರುವಂತೆ ರಾಜೇಶ್ ಭಟ್ ಸೂಚಿಸಿದ್ದರಂತೆ. ಅಷ್ಟು ಹೊತ್ತಿನವರೆಗೆ ಯಾಕೆ ನಿಲ್ಲಬೇಕೆಂದು ವಿದ್ಯಾರ್ಥಿನಿ ಪ್ರಶ್ನಿಸಿದರೆ, 8 ಗಂಟೆ ತನಕ ಎಲ್ಲರೂ ಕಚೇರಿಯಲ್ಲಿರುತ್ತಾರೆ ಎಂದು ಉತ್ತರಿಸಿದ್ದಂತೆ. ಅಂದು ರಾತ್ರಿ ರಾಜೇಶ್ ಭಟ್ ವಿದ್ಯಾರ್ಥಿನಿಯನ್ನು ತನ್ನ ಛೇಂಬರೊಳಗೆ ಕರೆಸಿ ಅಸಭ್ಯವಾಗಿ ವರ್ತಿಸಿ, ವಿದ್ಯಾರ್ಥಿನಿಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿರುವುದಾಗಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಇದಾದ ಬಳಿಕ ರಾಜೇಶ್ ಭಟ್ ಮೆಸೇಜ್ ಹಾಗೂ ಕರೆ ಮಾಡಿ ಮುಂದೆಂದೂ ಇಂತಹ ತಪ್ಪು ಮಾಡುವುದಿಲ್ಲ. ನೀನು ಮತ್ತೆ ಕಚೇರಿಗೆ ಬಾ ಎಂದು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್ ಭಟ್ ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು