1:05 AM Saturday1 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್ ಬಂಧನಕ್ಕೆ ಪೊಲೀಸರು ವಿಫಲ; ನಿರೀಕ್ಷಣಾ ಜಾಮೀನಿಗೆ ಅರ್ಜಿ

26/10/2021, 08:20

ಮಂಗಳೂರು( reporterkarnataka.com): ವಕೀಲ ರಾಜೇಶ್ ಭಟ್ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಇಂಟರ್ನಶಿಪ್ ವಿದ್ಯಾರ್ಥಿನಿ 

ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿ ಒಂದು ವಾರ ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ವಿಫಲರಾಗಿದ್ದಾರೆ. ಈ ನಡುವೆ ಆರೋಪಿ ರಾಜೇಶ್ ಭಟ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜೇಶ್ ಭಟ್ ಅಕ್ಟೋಬರ್ 21ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೋಮವಾರ(ಅ.25) ಮೊದಲ ವಿಚಾರಣೆ ನಡೆದಿತ್ತು. 

ಉತ್ತರ ಪ್ರದೇಶ ಮೂಲದ ಕಾನೂನು ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ವರ್ಶಿಸಿದ ಹಾಗೂ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪಕ್ಕೆ ರಾಜೇಶ್ ಭಟ್ ಗುರಿಯಾಗಿದ್ದಾರೆ. ಇಂಟರ್ನಶಿಪ್ ವಿದ್ಯಾರ್ಥಿನಿಯನ್ನು ರಾತ್ರಿ 8 ಗಂಟೆ ತನಕ ಕಚೇರಿಯಲ್ಲಿ ಇರುವಂತೆ ರಾಜೇಶ್ ಭಟ್ ಸೂಚಿಸಿದ್ದರಂತೆ. ಅಷ್ಟು ಹೊತ್ತಿನವರೆಗೆ ಯಾಕೆ ನಿಲ್ಲಬೇಕೆಂದು ವಿದ್ಯಾರ್ಥಿನಿ ಪ್ರಶ್ನಿಸಿದರೆ, 8 ಗಂಟೆ ತನಕ ಎಲ್ಲರೂ ಕಚೇರಿಯಲ್ಲಿರುತ್ತಾರೆ ಎಂದು ಉತ್ತರಿಸಿದ್ದಂತೆ. ಅಂದು ರಾತ್ರಿ ರಾಜೇಶ್ ಭಟ್ ವಿದ್ಯಾರ್ಥಿನಿಯನ್ನು ತನ್ನ ಛೇಂಬರೊಳಗೆ ಕರೆಸಿ ಅಸಭ್ಯವಾಗಿ ವರ್ತಿಸಿ, ವಿದ್ಯಾರ್ಥಿನಿಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿರುವುದಾಗಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಇದಾದ ಬಳಿಕ ರಾಜೇಶ್ ಭಟ್ ಮೆಸೇಜ್ ಹಾಗೂ ಕರೆ ಮಾಡಿ ಮುಂದೆಂದೂ ಇಂತಹ ತಪ್ಪು ಮಾಡುವುದಿಲ್ಲ. ನೀನು ಮತ್ತೆ ಕಚೇರಿಗೆ ಬಾ ಎಂದು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್ ಭಟ್ ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು