10:04 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿ ಮೇಲೆ ಹಲ್ಲೆ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಗ್ರಹ

10/09/2021, 08:11

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಲ್ ನಲ್ಲಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಾಸಕ ಕೆ.ಆರ್‌.ರಮೇಶ್ ಕುಮಾರ್ ಆಗ್ರಹಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿ ಹಾಗೂ ಆಕೆಯ ಪೋಷಕರನ್ನು ಭೇಟಿಯಾಗಿ ಅವರು ಸಾಂತ್ವಾನ ಹೇಳಿದರು.

ಈ ಘಟನೆಯಲ್ಲಿ ಹಲ್ಲೆಗೆ ಒಳಗಾಗಿರುವ ವಿದ್ಯಾರ್ಥಿನಿಯರನ್ನು ಕೇಸ್‌ನಲ್ಲಿ ಸೇರಿಸಿರುವುದು ದುರದೃಷ್ಟಕರ. ಇದು ಅವರನ್ನು ಹೆದರಿಸಿ , ಮೊಕದ್ದಮೆ ವಾಪಸ್ ಪಡೆಯುವಂತೆ ಮಾಡಲು ಮಾಡಿರುವ ತಂತ್ರವಾಗಿದೆ.

ಪೊಲೀಸರು ಅಮಾಯಕ ಹೆಣ್ಣು ಮಕ್ಕಳನ್ನು ಕೇಸ್‌ನಲ್ಲಿ ಸೇರಿಸಿ ಮಾನಸಿಕ ಹಿಂಸೆ ನೀಡುವುದು ಸರಿಯಲ್ಲ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಸುವವರಿಗೆ ತೆಲಂಗಾಣ ಪೊಲೀಸರು ಸರಿಯಾಗಿ ಬುದ್ಧಿ ಕಲಿಸಿದ್ದಾರೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಅಂಥ ಧೈರ್ಯ ಪ್ರದರ್ಶಿಸಬೇಕಾಗಿದೆ ಎಂದು ಹೇಳಿದರು. 

ವಿಳಾಸ ಗೊತ್ತಿದೆ , ಹಲ್ಲೆ ನಡೆಸಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಹೀಗಿದ್ದೂ , ಅವರನ್ನು ಹಿಡಿಯದಿರುವುದು ಸಂಶಯಕ್ಕೆ ಎಡೆಮಾಡಿಕೊಡುತ್ತದೆ. ಆದ್ದರಿಂದ ಎರಡು ದಿನಗಳ ಒಳಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ , ಡಿವೈಎಸ್ಪಿ ಕೆ.ಸಿ.ಗಿರಿ, ತಾಲ್ಲೂಕು ವೈದ್ಯಾಧಿಕಾರಿ ಡಾ . ಎಂ.ಸಿ.ವಿಜಯ , ಆಸ್ಪತ್ರೆ ಆಡಳಿತಾಧಿಕಾರಿ ಡಿ . ಶ್ರೀನಿವಾಸ್ , ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ. ಶ್ರೀನಿವಾಸನ್ , ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ , ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ವೆಂಕಟೇಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು