9:52 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಗೆ ಮೊಬೈಲ್ ಲಿಂಕ್ ಕಳುಹಿಸಿ ಅನ್ಲೈನ್ ಮೂಲಕ 80 ಸಾವಿರಕ್ಕೂ ಹೆಚ್ಚು ಹಣ ಗುಳುಂ: ದೂರು ದಾಖಲು

20/02/2023, 22:53

ಉಡುಪಿ(reporterkarnataka.com): ವಿದ್ಯಾರ್ಥಿನಿಯೋರ್ವಳ ಮೊಬೈಲ್‌ಗೆ ಲಿಂಕ್ ಕಳಿಸಿ ಆಕೆಯ ಖಾತೆಯಿಂದ ಒಟ್ಟು 80,602 ರೂ. ಹಣವನ್ನು ಆನ್ ಲೈನ್ ವರ್ಗಾವಣೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ರೂಪಶ್ರೀ ಎಂ.ಸಿ. ಎಂಬ ವಿದ್ಯಾರ್ಥಿನಿ ಹಣ ಕಳೆದುಕೊಂಡವರು .
ವಿದ್ಯಾಭ್ಯಾಸಕ್ಕಾಗಿ ಪುಸ್ತಕಗಳನ್ನು ಆನ್ ಲೈನ್ ನಲ್ಲಿ ಖರೀದಿಸಲುವ ಆರ್ಡರ್ ಮಾಡಿ ಒಂದು ವಾರ ಕಳೆದರೂ ಪುಸ್ತಕಗಳು ಬಾರದಿದ್ದಾಗ ಗೂಗಲ್ ನಲ್ಲಿ ಕೋರಿಯರ್ ಸಂಸ್ಥೆಯ ವಿವರವನ್ನು ಹುಡುಕಾಡಿ ಕಂಡು ಬಂದ ಮೊಬೈಲ್ ನಂಬ್ರಕ್ಕೆ ಕರೆ ಮಾಡಿದ್ದಾರೆ. ಆಗ ವ್ಯಕ್ತಿಯೊಬ್ಬ ತಾನು ಕೋರಿಯರ್ ಸಂಸ್ಥೆಯವನೆಂದು ನಂಬಿಸಿ, ವಿದ್ಯಾರ್ಥಿನಿಯ ಮೊಬೈಲ್ ಗೆ ಲಿಂಕ್ ಒಂದನ್ನು ಕಳುಹಿಸಿ, ವಿವರ ಪಡೆದು, ಅದೇ ದಿನ ಕ್ರಮವಾಗಿ 19 ಟ್ರಾನ್ಸೆಕ್ಷನ್ ಮುಖೇನ ಆಕೆಯ ಹೆಚ್.ಡಿ.ಎಫ್.ಸಿ. ಬ್ಯಾಂಕ್, ಕುಂದಾಪುರ ಖಾತೆಯಿಂದ ಒಟ್ಟು ರೂಪಾಯಿ 80,602 ಹಣವನ್ನು ಆನ್ ಲೈನ್ ಮುಖೇನ ವರ್ಗಾವಣೆ ಮಾಡಿಕೊಂಡಿದ್ದಾನೆ. ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು