6:02 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ: 11 ದಲಿತ ಸಂಘಟನೆಗಳಿಂದ 11 ಕಿಮೀ. ಕಾಲ್ನಡಿಗೆ ಜಾಥಾ 

21/09/2021, 09:10

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಡಿಗೋಳ್ ಬಳಿ ವಿದ್ಯಾರ್ಥಿನಿಯರ ಮೇಲೆ ನಡೆದ ಹಲ್ಲೆ

ಘಟನೆಯನ್ನು ಖಂಡಿಸಿ ಸೋಮವಾರ 11 ದಲಿತ ಸಂಘಟನೆಗಳ ಕಾರ್ಯಕರ್ತರು 11 ಕಿ.ಮೀಟರ್ ಕಾಲ್ನಡಿಗೆ ಜಾಥಾ ನಡೆಸಿದರು.

ಮತ್ತೊಂದು ಬಾರಿ ಯಾವ ಹೆಣ್ಣು ಮಗುವಿನ ಮೇಲೆಯೂ ಈ ರೀತಿಯ ದಬ್ಬಾಳಿಕೆ , ದೌರ್ಜನ್ಯ ನಡೆಯಬಾರದು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ಬೆಳಿಗ್ಗೆ 10 ಗಂಟೆಗೆ ತಾಡಿಗೋಲ್ ಗ್ರಾಮದಿಂದ ಹೊರಟ ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ಜಾಥಾ ಹಮ್ಮಿಕೊಂಡರು. ರಸ್ತೆಯುದ್ದಕ್ಕೂ ಜಾಥಾದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಬಂದ ದಲಿತ ಸಂಘಟನೆಗಳ ಮುಖಂಡರುಗಳು ಸಾಥ್ ನೀಡಿದರು. 

ಕೋಲಾರ ಮದನಪಲ್ಲಿ ರಸ್ತೆ ಮೂಲಕ ಜಾಥ ಸಾಗಿ ಬರುತ್ತಿದ್ದಾಗ ಟ್ರಾಫಿಕ್ ಜಾಮ್ ಆಗದಂತೆ ಪೊಲೀಸರು ಹರಸಾಹಸ ಪಡುತ್ತಿದ್ದರು.

 ಶ್ರೀನಿವಾಸಪುರಕ್ಕೆ ಜಾಥಾ ಬರುವೊಳಗಾಗಿ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಜಮಾ ಆದರು. ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯ ತನಕ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಈ ಎರಡು ಸರ್ಕಾರಗಳನ್ನು ಕಿತ್ತೊಗೆಯ ತನಕ ನಮ್ಮ ಮೇಲೆ ದೌರ್ಜನ್ಯಗಳು ನಡೆಯುತ್ತಲೆ ಇರುತ್ತವೆ. ಮುಂದಿನ ದಿನಗಳಲ್ಲಿ ಇದಕ್ಕೆ ಒಂದು ಇತಿಶ್ರೀ ಹಾಡಲೇಬೇಕು ದಲಿತ ಮುಖಂಡರಿಂದ ಕೇಳಿ ಬರುತ್ತಿತ್ತು . ರಸ್ತೆಯುದ್ದಕ್ಕೂ ಕ್ರಾಂತಿಗೀತೆಗಳನ್ನು ಹಾಡುತ್ತಾ ತಮಟೆ ವಾದ್ಯಗಳ ಸದ್ದು ಕೇಳಿ ಬರುತ್ತಿತ್ತು .

ಇತ್ತೀಚಿನ ಸುದ್ದಿ

ಜಾಹೀರಾತು