10:13 AM Thursday19 - June 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ: 11 ದಲಿತ ಸಂಘಟನೆಗಳಿಂದ 11 ಕಿಮೀ. ಕಾಲ್ನಡಿಗೆ ಜಾಥಾ 

21/09/2021, 09:10

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಡಿಗೋಳ್ ಬಳಿ ವಿದ್ಯಾರ್ಥಿನಿಯರ ಮೇಲೆ ನಡೆದ ಹಲ್ಲೆ

ಘಟನೆಯನ್ನು ಖಂಡಿಸಿ ಸೋಮವಾರ 11 ದಲಿತ ಸಂಘಟನೆಗಳ ಕಾರ್ಯಕರ್ತರು 11 ಕಿ.ಮೀಟರ್ ಕಾಲ್ನಡಿಗೆ ಜಾಥಾ ನಡೆಸಿದರು.

ಮತ್ತೊಂದು ಬಾರಿ ಯಾವ ಹೆಣ್ಣು ಮಗುವಿನ ಮೇಲೆಯೂ ಈ ರೀತಿಯ ದಬ್ಬಾಳಿಕೆ , ದೌರ್ಜನ್ಯ ನಡೆಯಬಾರದು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ಬೆಳಿಗ್ಗೆ 10 ಗಂಟೆಗೆ ತಾಡಿಗೋಲ್ ಗ್ರಾಮದಿಂದ ಹೊರಟ ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ಜಾಥಾ ಹಮ್ಮಿಕೊಂಡರು. ರಸ್ತೆಯುದ್ದಕ್ಕೂ ಜಾಥಾದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಬಂದ ದಲಿತ ಸಂಘಟನೆಗಳ ಮುಖಂಡರುಗಳು ಸಾಥ್ ನೀಡಿದರು. 

ಕೋಲಾರ ಮದನಪಲ್ಲಿ ರಸ್ತೆ ಮೂಲಕ ಜಾಥ ಸಾಗಿ ಬರುತ್ತಿದ್ದಾಗ ಟ್ರಾಫಿಕ್ ಜಾಮ್ ಆಗದಂತೆ ಪೊಲೀಸರು ಹರಸಾಹಸ ಪಡುತ್ತಿದ್ದರು.

 ಶ್ರೀನಿವಾಸಪುರಕ್ಕೆ ಜಾಥಾ ಬರುವೊಳಗಾಗಿ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಜಮಾ ಆದರು. ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯ ತನಕ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಈ ಎರಡು ಸರ್ಕಾರಗಳನ್ನು ಕಿತ್ತೊಗೆಯ ತನಕ ನಮ್ಮ ಮೇಲೆ ದೌರ್ಜನ್ಯಗಳು ನಡೆಯುತ್ತಲೆ ಇರುತ್ತವೆ. ಮುಂದಿನ ದಿನಗಳಲ್ಲಿ ಇದಕ್ಕೆ ಒಂದು ಇತಿಶ್ರೀ ಹಾಡಲೇಬೇಕು ದಲಿತ ಮುಖಂಡರಿಂದ ಕೇಳಿ ಬರುತ್ತಿತ್ತು . ರಸ್ತೆಯುದ್ದಕ್ಕೂ ಕ್ರಾಂತಿಗೀತೆಗಳನ್ನು ಹಾಡುತ್ತಾ ತಮಟೆ ವಾದ್ಯಗಳ ಸದ್ದು ಕೇಳಿ ಬರುತ್ತಿತ್ತು .

ಇತ್ತೀಚಿನ ಸುದ್ದಿ

ಜಾಹೀರಾತು