9:57 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯರಲ್ಲಿ ಸಮಯ ಪರಿಪಾಲನೆ, ನಾಯಕತ್ವದ ಗುಣಗಳು ಜನ್ಮದತ್ತ: ಡಾ. ನಾಗರತ್ನ ಕೆ. ಎ .

01/02/2022, 00:01

ಮಂಗಳೂರು(reporterkarnataka.com): ವಿದ್ಯಾರ್ಥಿನಿಯರಲ್ಲಿ ಸಮಯ ಪರಿಪಾಲನೆ ಹಾಗೂ ನಾಯಕತ್ವದ ಗುಣಗಳು ಜನ್ಮದತ್ತವಾಗಿ ಬಂದಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಹೇಳಿದರು.

ಅವರು ನಗರದ ಬೆಸೆಂಟ್  ಮಹಿಳಾ  ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರು ಯುವ ಶಕ್ತಿಗಳಿಗೆ ಪ್ರೇರಣೆ.  ಯುವಕರಲ್ಲಿ ಹಿಂದೆಯೂ ಸಮಸ್ಯೆಗಳಿದ್ದವು ಈಗಲೂ ಸಮಸ್ಯೆಗಳಿವೆ . ಆದ್ದರಿಂದ ಸಮಸ್ಯೆಗಳಿಂದ ದೂರ ಸರಿಯದೆ ತಮ್ಮೊಳಗಿನ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ವಾಮಿವಿವೇಕಾನಂದರ ತತ್ವ-ಆದರ್ಶ ಗಳನ್ನು ಪಾಲಿಸಿ, ಅದರಿಂದ ರಾಷ್ಟ್ರೀಯತೆ,ಮಾನವೀಯ ಸಂಬಂಧಗಳು ಉತ್ತಮವಾಗಿ ಬೆಳೆಯಲು ಸಹಕಾರಿ ಎಂದುರಾ. ಸೇ. ಯೋ. ಸ್ವಯಂ ಸೇವಕಿಯರಿಗೆ ಕಿವಿ ಮಾತು ಹೇಳಿದರು.


ವಿದ್ಯಾರ್ಥಿನಿಯರಲ್ಲಿ ಸಮಯಪಾಲನೆ, ನಾಯಕತ್ವದ ಗುಣಗಳು ಜನ್ಮದತ್ತವಾಗಿ ಇರುತ್ತದೆ, ಎಂದರು.

ಬೆಸೆಂಟ್ ಕಾಲೇಜಿನ ಪ್ರಾಂಶುಪಾಲ ಡಾ. ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸಿಂಪತಿ ಗಿಟ್ಟಿಸಿಕೊಳ್ಳಲು ಸೇವೆ ಮಾಡಬೇಡಿ. ಅದರಿಂದ ಏನೂ ಪ್ರಯೋಜನವಿಲ್ಲ. ನಿಷ್ಕಲ್ಮಶ ಸೇವೆ ಮಾಡಿ ಅದರಲ್ಲಿರುವ ಕಷ್ಟ-ಸುಖಗಳನ್ನು ಅನುಭವಿಸಿದಾಗ ಮಾತ್ರ ಜೀವನ ಏನು ಎಂಬುದು ಅರಿವಾಗುತ್ತದೆ.





ರಾ.ಸೆ.ಯೋ ಯೋಜನಾಧಿಕಾರಿ  ರವಿಪ್ರಭಾ,  ರಾ. ಸೇ. ಯೋ ಕಾರ್ಯದರ್ಶಿಗಳಾದ ಸ್ಮಿತಾ, ಪೂಜಾ,ಉಪನ್ಯಾಸಕರಾದ ಡಾ. ಸತೀಶ್.ಕೆ ಅರುಣ್, ರಕ್ಷಿತ್, ಸ್ವಾತಿ, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು