9:18 PM Thursday10 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯರಲ್ಲಿ ಸಮಯ ಪರಿಪಾಲನೆ, ನಾಯಕತ್ವದ ಗುಣಗಳು ಜನ್ಮದತ್ತ: ಡಾ. ನಾಗರತ್ನ ಕೆ. ಎ .

01/02/2022, 00:01

ಮಂಗಳೂರು(reporterkarnataka.com): ವಿದ್ಯಾರ್ಥಿನಿಯರಲ್ಲಿ ಸಮಯ ಪರಿಪಾಲನೆ ಹಾಗೂ ನಾಯಕತ್ವದ ಗುಣಗಳು ಜನ್ಮದತ್ತವಾಗಿ ಬಂದಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಹೇಳಿದರು.

ಅವರು ನಗರದ ಬೆಸೆಂಟ್  ಮಹಿಳಾ  ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರು ಯುವ ಶಕ್ತಿಗಳಿಗೆ ಪ್ರೇರಣೆ.  ಯುವಕರಲ್ಲಿ ಹಿಂದೆಯೂ ಸಮಸ್ಯೆಗಳಿದ್ದವು ಈಗಲೂ ಸಮಸ್ಯೆಗಳಿವೆ . ಆದ್ದರಿಂದ ಸಮಸ್ಯೆಗಳಿಂದ ದೂರ ಸರಿಯದೆ ತಮ್ಮೊಳಗಿನ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ವಾಮಿವಿವೇಕಾನಂದರ ತತ್ವ-ಆದರ್ಶ ಗಳನ್ನು ಪಾಲಿಸಿ, ಅದರಿಂದ ರಾಷ್ಟ್ರೀಯತೆ,ಮಾನವೀಯ ಸಂಬಂಧಗಳು ಉತ್ತಮವಾಗಿ ಬೆಳೆಯಲು ಸಹಕಾರಿ ಎಂದುರಾ. ಸೇ. ಯೋ. ಸ್ವಯಂ ಸೇವಕಿಯರಿಗೆ ಕಿವಿ ಮಾತು ಹೇಳಿದರು.


ವಿದ್ಯಾರ್ಥಿನಿಯರಲ್ಲಿ ಸಮಯಪಾಲನೆ, ನಾಯಕತ್ವದ ಗುಣಗಳು ಜನ್ಮದತ್ತವಾಗಿ ಇರುತ್ತದೆ, ಎಂದರು.

ಬೆಸೆಂಟ್ ಕಾಲೇಜಿನ ಪ್ರಾಂಶುಪಾಲ ಡಾ. ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸಿಂಪತಿ ಗಿಟ್ಟಿಸಿಕೊಳ್ಳಲು ಸೇವೆ ಮಾಡಬೇಡಿ. ಅದರಿಂದ ಏನೂ ಪ್ರಯೋಜನವಿಲ್ಲ. ನಿಷ್ಕಲ್ಮಶ ಸೇವೆ ಮಾಡಿ ಅದರಲ್ಲಿರುವ ಕಷ್ಟ-ಸುಖಗಳನ್ನು ಅನುಭವಿಸಿದಾಗ ಮಾತ್ರ ಜೀವನ ಏನು ಎಂಬುದು ಅರಿವಾಗುತ್ತದೆ.





ರಾ.ಸೆ.ಯೋ ಯೋಜನಾಧಿಕಾರಿ  ರವಿಪ್ರಭಾ,  ರಾ. ಸೇ. ಯೋ ಕಾರ್ಯದರ್ಶಿಗಳಾದ ಸ್ಮಿತಾ, ಪೂಜಾ,ಉಪನ್ಯಾಸಕರಾದ ಡಾ. ಸತೀಶ್.ಕೆ ಅರುಣ್, ರಕ್ಷಿತ್, ಸ್ವಾತಿ, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು