2:07 AM Monday18 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯರಲ್ಲಿ ಸಮಯ ಪರಿಪಾಲನೆ, ನಾಯಕತ್ವದ ಗುಣಗಳು ಜನ್ಮದತ್ತ: ಡಾ. ನಾಗರತ್ನ ಕೆ. ಎ .

01/02/2022, 00:01

ಮಂಗಳೂರು(reporterkarnataka.com): ವಿದ್ಯಾರ್ಥಿನಿಯರಲ್ಲಿ ಸಮಯ ಪರಿಪಾಲನೆ ಹಾಗೂ ನಾಯಕತ್ವದ ಗುಣಗಳು ಜನ್ಮದತ್ತವಾಗಿ ಬಂದಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಹೇಳಿದರು.

ಅವರು ನಗರದ ಬೆಸೆಂಟ್  ಮಹಿಳಾ  ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರು ಯುವ ಶಕ್ತಿಗಳಿಗೆ ಪ್ರೇರಣೆ.  ಯುವಕರಲ್ಲಿ ಹಿಂದೆಯೂ ಸಮಸ್ಯೆಗಳಿದ್ದವು ಈಗಲೂ ಸಮಸ್ಯೆಗಳಿವೆ . ಆದ್ದರಿಂದ ಸಮಸ್ಯೆಗಳಿಂದ ದೂರ ಸರಿಯದೆ ತಮ್ಮೊಳಗಿನ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ವಾಮಿವಿವೇಕಾನಂದರ ತತ್ವ-ಆದರ್ಶ ಗಳನ್ನು ಪಾಲಿಸಿ, ಅದರಿಂದ ರಾಷ್ಟ್ರೀಯತೆ,ಮಾನವೀಯ ಸಂಬಂಧಗಳು ಉತ್ತಮವಾಗಿ ಬೆಳೆಯಲು ಸಹಕಾರಿ ಎಂದುರಾ. ಸೇ. ಯೋ. ಸ್ವಯಂ ಸೇವಕಿಯರಿಗೆ ಕಿವಿ ಮಾತು ಹೇಳಿದರು.


ವಿದ್ಯಾರ್ಥಿನಿಯರಲ್ಲಿ ಸಮಯಪಾಲನೆ, ನಾಯಕತ್ವದ ಗುಣಗಳು ಜನ್ಮದತ್ತವಾಗಿ ಇರುತ್ತದೆ, ಎಂದರು.

ಬೆಸೆಂಟ್ ಕಾಲೇಜಿನ ಪ್ರಾಂಶುಪಾಲ ಡಾ. ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸಿಂಪತಿ ಗಿಟ್ಟಿಸಿಕೊಳ್ಳಲು ಸೇವೆ ಮಾಡಬೇಡಿ. ಅದರಿಂದ ಏನೂ ಪ್ರಯೋಜನವಿಲ್ಲ. ನಿಷ್ಕಲ್ಮಶ ಸೇವೆ ಮಾಡಿ ಅದರಲ್ಲಿರುವ ಕಷ್ಟ-ಸುಖಗಳನ್ನು ಅನುಭವಿಸಿದಾಗ ಮಾತ್ರ ಜೀವನ ಏನು ಎಂಬುದು ಅರಿವಾಗುತ್ತದೆ.





ರಾ.ಸೆ.ಯೋ ಯೋಜನಾಧಿಕಾರಿ  ರವಿಪ್ರಭಾ,  ರಾ. ಸೇ. ಯೋ ಕಾರ್ಯದರ್ಶಿಗಳಾದ ಸ್ಮಿತಾ, ಪೂಜಾ,ಉಪನ್ಯಾಸಕರಾದ ಡಾ. ಸತೀಶ್.ಕೆ ಅರುಣ್, ರಕ್ಷಿತ್, ಸ್ವಾತಿ, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು