4:51 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ವಿದ್ಯುತ್ ಅವಘಡ: ಕೋತಿ ದಾರುಣ ಸಾವು, ಮತ್ತೊಂದಕ್ಕೆ ತೀವ್ರ ಗಾಯ; ಆಹಾರ ಹುಡುಕಿ ಬಂದ ವಾನರನಿಗೆ ಕರೆಂಟ್ ಶಾಕ್

12/06/2023, 19:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ಅವಘಡಕ್ಕೆ ಕೋತಿಯೊಂದು ಸಾವನ್ನಪ್ಪಿದ್ದು, ಇನ್ನೊಂದು ಕೋತಿ ತೀವ್ರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ .
ನಿಡುವಾಳೆಯ ನೇರಳಗಂಡಿಯಲ್ಲಿ ಆಹಾರ ಹುಡುಕಿಕೊಂಡು ಬಂದ ಮಂಗಗಳಿಗೆ 11 ಕೆವಿ ವಿದ್ಯುತ್ ತಗುಲಿ ಅವಘಡ ಆಗಿತ್ತು. ಒಂದು ಸ್ಥಳದಲ್ಲಿಯೇ ಮೃತಪಟ್ಟರೆ ಗಾಯಗೊಂಡ ಮತ್ತೊಂದು ಕೋತಿಯನ್ನು ನಿಡುವಾಳೆ ಯುವಕರ ತಂಡ ನಿಡುವಾಳೆಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಈ ಸಂದರ್ಭದಲ್ಲಿ ನಿಡುವಾಳೆಯ ಆಟೋ ಚಾಲಕರಾದ ಹರೀಶ್ ಉರುವಿನಖಾನ್, ಸುರೇಶ್ ಅಂಬೇಡ್ಕರ್ ನಗರ, ಭಗತ್ ಸಿಂಗ್ ನಗರದ ಪ್ರದೀಪ್ , ಚೇತನ್, ಪ್ರವೀಣ್, ಸಂಜಯ್, ವಸಂತ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು