6:08 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ವಿದ್ಯುತ್ ಅವಘಡಕ್ಕೆ ಪ್ರಿಜ್ ಬ್ಲಾಸ್ಟ್:  30 ಸಾವಿರ ನಗದು ಸೇರಿ 1 ಲಕ್ಷ ರೂ. ಮೌಲ್ಯ ಪೀಠೋಪಕರಣ ಭಸ್ಮ

09/10/2021, 16:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ 20ನೇ ವಾರ್ಡ್ ಗೋವಿಂದಗಿರಿ ತಾಂಡ ಗ್ರಾಮದಲ್ಲಿ ಗೋಪ್ಯಾನಾಯ್ಕ ಎಂಬುವರಿಗೆ ಸೇರಿದ ಅಂಗಡಿಯಲ್ಲಿದ್ದ ಪ್ರಿಜ್ ವಿದ್ಯುತ್ ಸರಬರಾಜಿನಲ್ಲಾದ ಏರುಪೇರಿನಿಂದ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಯಾವುದ ಸಾವು- ನೋವು ಸಂಭವಿಸಿಲ್ಲ.

ಸೆ 7ರಂದು ರಾತ್ರಿ9 ಗಂಟೆಯಲ್ಲಿ ವಿದ್ಯುತ್ ಸರಬರಾಜಿಲ್ಲಾದ  ಏರುಪೇರಿನಿಂದಾಗಿ ಪ್ರಿಜ್ ಬ್ಲಾಸ್ಟ್ ಆಗಿದೆ. ಪ್ರಿಜ್ ಬ್ಲಾಸ್ಟ್ ಆದ ಪರಿಣಾಮ ಮೇಲ್ಚಾವಣೆ ಕಿತ್ತಿದ್ದು ಬೆಂಕಿ ಹೊತ್ತಿ ಉರಿದ ಪರಿಣಾಮ ದುಬಾರಿ ಬೆಲೆಯ ಪೀಠೋಪಕರಣಗಳು ಹಾಗೂ 30 ಸಾವಿರ ನಗದು ಹಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.

ಈ  ಸಂದರ್ಭದಲ್ಲಿ ಹತ್ತಿರದಲ್ಲಿ ಯಾರು ಇಲ್ಲದ್ದರಿಂದಾಗಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ದುಬಾರಿ ಬೆಲೆಯ ಪೀಠೋಪಕರಣಗಳು ಹಾಗೂ ಪ್ರಿಜ್ ಸಂಪೂರ್ಣ ಭಸ್ಮಗೊಂಡಿದ್ದು. ವಿಷಯ ತಿಳಿದ ಕೂಡಲೇ ಜಾಗ್ರತರಾದ ಅಕ್ಕಪಕ್ಕದವರು ಹಾಗೂ ಗ್ರ‍ಾಮಸ್ಥರು, ಸಮಯ ಪ್ರಜ್ಞೆ ಮೆರದಿದ್ದು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಪ್ರಿಜ್ 

ಬ್ಲಾಸ್ಟ್ ನಿಂದಾಗಿ ಬೆಂಕಿ ಹೊತ್ತಿ ಹುರಿದಿರುವುದರಿಂದಾಗಿ ನಗದು ಹಣ ಸೇರಿದಂತೆ ದುಭಾರಿ ಪೀಟೋಪಕರಣಗಳು ಸುಟ್ಟು ಕರಕಲಾಗಿದ್ದು ಒಟ್ಟು 1 ಲಕ್ಷಕ್ಕೂ ಅಧಿಕ ನಷ್ಟ ವಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು