4:53 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆಯಿಂದ ಕುಕ್ಕುಟೋದ್ಯಮಕ್ಕೆ ಹೊಡೆತ: ಸರಕಾರದ ಕ್ರಮಕ್ಕೆ ಕೆಪಿಎಫ್‌ಬಿಎ ವಿರೋಧ

27/06/2023, 14:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯುನಿಟ್‌ಗೆ 2.89 ರೂ.ಗೆ ಏರಿಕೆಯಾಗಿರುವುದ್ದರಿಂದ ಅನೇಕ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ನಡೆಸಲು ಸಾಧ್ಯವಿಲ್ಲವೆಂದು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್‌ ಮತ್ತು ಬ್ರೀಡರ್ಸ್‌ ಅಸೋಸಿಯೇಶನ್(ಕೆಪಿಎಫ್‌ಬಿಎ) ವಿದ್ಯುತ್ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿದೆ.
ಕೆಪಿಎಫ್‌ಬಿಎ ಅಧ್ಯಕ್ಷ ಡಾ. ಸುಶಾಂತ್ ಬಿ.ರೈ ಮಾತನಾಡಿ, ವಿದ್ಯುತ್ ದರದ ಹೆಚ್ಚಳವು ಈಗಾಗಲೇ ಅತ್ಯಂತ ಕಡಿಮೆ ಲಾಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಳಿ ಫಾರಂಗಳಿಗೆ ಹೆಚ್ಚುವರಿ ಹೊರೆಯಾಗಲಿದ್ದು, ಕೋಳಿ ಘಟಕಗಳು ಮತ್ತು ಫೀಡ್ ತಯಾರಿಕೆಯ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಗ್ರಾಹಕರಿಗೂ ಖರೀದಿಯಲ್ಲಿಯೂ ದರ ಏರಿಕೆಯಾಗುವುದರಿಂದ ಸಮಸ್ಯೆಯಾಗುತ್ತದೆ. ಇದರೊಂದಿಗೆ ಅನೇಕ ಘಟಕಗಳು ತಮಿಳುನಾಡಿನ ಹೊಸೂರಿಗೆ ಮತ್ತು ನೆರೆಯ ರಾಜ್ಯಗಳಾದ ಕೇರಳ, ಆಂದ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಇತರ ಗಡಿ ಪ್ರದೇಶಗಳಿಗೆ ವಲಸೆ ಹೋಗುತ್ತವೆ ಇದರಿಂದ ರಾಜ್ಯದ ಆದಾಯ ಜತೆಗೆ ಉದ್ಯೋಗ ಸೃಷ್ಟಿಯಲ್ಲೂ ನಷ್ಟವಾಗುತ್ತದೆ. ಕೋಳಿ ಮತ್ತು ಮೇವು ತಯಾರಿಕಾ ವಲಯದ ಹಿತಾಸಕ್ತಿಯಿಂದ ಮಾತ್ರವಲ್ಲದೆ ಹೂಡಿಕೆಯ ತಾಣವಾಗಿರುವ ಹಿನ್ನೆಲೆ ರಾಜ್ಯದ ಹೆಚ್ಚಿನ ಹಿತಾಸಕ್ತಿಯಲ್ಲಿ ವಿದ್ಯುತ್ ದರದ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಕೆಪಿಎಫ್‌ಬಿಎ ಸರ್ಕಾರವನ್ನು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು