6:15 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆಯಿಂದ ಕುಕ್ಕುಟೋದ್ಯಮಕ್ಕೆ ಹೊಡೆತ: ಸರಕಾರದ ಕ್ರಮಕ್ಕೆ ಕೆಪಿಎಫ್‌ಬಿಎ ವಿರೋಧ

27/06/2023, 14:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯುನಿಟ್‌ಗೆ 2.89 ರೂ.ಗೆ ಏರಿಕೆಯಾಗಿರುವುದ್ದರಿಂದ ಅನೇಕ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ನಡೆಸಲು ಸಾಧ್ಯವಿಲ್ಲವೆಂದು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್‌ ಮತ್ತು ಬ್ರೀಡರ್ಸ್‌ ಅಸೋಸಿಯೇಶನ್(ಕೆಪಿಎಫ್‌ಬಿಎ) ವಿದ್ಯುತ್ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿದೆ.
ಕೆಪಿಎಫ್‌ಬಿಎ ಅಧ್ಯಕ್ಷ ಡಾ. ಸುಶಾಂತ್ ಬಿ.ರೈ ಮಾತನಾಡಿ, ವಿದ್ಯುತ್ ದರದ ಹೆಚ್ಚಳವು ಈಗಾಗಲೇ ಅತ್ಯಂತ ಕಡಿಮೆ ಲಾಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಳಿ ಫಾರಂಗಳಿಗೆ ಹೆಚ್ಚುವರಿ ಹೊರೆಯಾಗಲಿದ್ದು, ಕೋಳಿ ಘಟಕಗಳು ಮತ್ತು ಫೀಡ್ ತಯಾರಿಕೆಯ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಗ್ರಾಹಕರಿಗೂ ಖರೀದಿಯಲ್ಲಿಯೂ ದರ ಏರಿಕೆಯಾಗುವುದರಿಂದ ಸಮಸ್ಯೆಯಾಗುತ್ತದೆ. ಇದರೊಂದಿಗೆ ಅನೇಕ ಘಟಕಗಳು ತಮಿಳುನಾಡಿನ ಹೊಸೂರಿಗೆ ಮತ್ತು ನೆರೆಯ ರಾಜ್ಯಗಳಾದ ಕೇರಳ, ಆಂದ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಇತರ ಗಡಿ ಪ್ರದೇಶಗಳಿಗೆ ವಲಸೆ ಹೋಗುತ್ತವೆ ಇದರಿಂದ ರಾಜ್ಯದ ಆದಾಯ ಜತೆಗೆ ಉದ್ಯೋಗ ಸೃಷ್ಟಿಯಲ್ಲೂ ನಷ್ಟವಾಗುತ್ತದೆ. ಕೋಳಿ ಮತ್ತು ಮೇವು ತಯಾರಿಕಾ ವಲಯದ ಹಿತಾಸಕ್ತಿಯಿಂದ ಮಾತ್ರವಲ್ಲದೆ ಹೂಡಿಕೆಯ ತಾಣವಾಗಿರುವ ಹಿನ್ನೆಲೆ ರಾಜ್ಯದ ಹೆಚ್ಚಿನ ಹಿತಾಸಕ್ತಿಯಲ್ಲಿ ವಿದ್ಯುತ್ ದರದ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಕೆಪಿಎಫ್‌ಬಿಎ ಸರ್ಕಾರವನ್ನು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು