9:31 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆಯಿಂದ ಕುಕ್ಕುಟೋದ್ಯಮಕ್ಕೆ ಹೊಡೆತ: ಸರಕಾರದ ಕ್ರಮಕ್ಕೆ ಕೆಪಿಎಫ್‌ಬಿಎ ವಿರೋಧ

27/06/2023, 14:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯುನಿಟ್‌ಗೆ 2.89 ರೂ.ಗೆ ಏರಿಕೆಯಾಗಿರುವುದ್ದರಿಂದ ಅನೇಕ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ನಡೆಸಲು ಸಾಧ್ಯವಿಲ್ಲವೆಂದು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್‌ ಮತ್ತು ಬ್ರೀಡರ್ಸ್‌ ಅಸೋಸಿಯೇಶನ್(ಕೆಪಿಎಫ್‌ಬಿಎ) ವಿದ್ಯುತ್ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿದೆ.
ಕೆಪಿಎಫ್‌ಬಿಎ ಅಧ್ಯಕ್ಷ ಡಾ. ಸುಶಾಂತ್ ಬಿ.ರೈ ಮಾತನಾಡಿ, ವಿದ್ಯುತ್ ದರದ ಹೆಚ್ಚಳವು ಈಗಾಗಲೇ ಅತ್ಯಂತ ಕಡಿಮೆ ಲಾಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಳಿ ಫಾರಂಗಳಿಗೆ ಹೆಚ್ಚುವರಿ ಹೊರೆಯಾಗಲಿದ್ದು, ಕೋಳಿ ಘಟಕಗಳು ಮತ್ತು ಫೀಡ್ ತಯಾರಿಕೆಯ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಗ್ರಾಹಕರಿಗೂ ಖರೀದಿಯಲ್ಲಿಯೂ ದರ ಏರಿಕೆಯಾಗುವುದರಿಂದ ಸಮಸ್ಯೆಯಾಗುತ್ತದೆ. ಇದರೊಂದಿಗೆ ಅನೇಕ ಘಟಕಗಳು ತಮಿಳುನಾಡಿನ ಹೊಸೂರಿಗೆ ಮತ್ತು ನೆರೆಯ ರಾಜ್ಯಗಳಾದ ಕೇರಳ, ಆಂದ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಇತರ ಗಡಿ ಪ್ರದೇಶಗಳಿಗೆ ವಲಸೆ ಹೋಗುತ್ತವೆ ಇದರಿಂದ ರಾಜ್ಯದ ಆದಾಯ ಜತೆಗೆ ಉದ್ಯೋಗ ಸೃಷ್ಟಿಯಲ್ಲೂ ನಷ್ಟವಾಗುತ್ತದೆ. ಕೋಳಿ ಮತ್ತು ಮೇವು ತಯಾರಿಕಾ ವಲಯದ ಹಿತಾಸಕ್ತಿಯಿಂದ ಮಾತ್ರವಲ್ಲದೆ ಹೂಡಿಕೆಯ ತಾಣವಾಗಿರುವ ಹಿನ್ನೆಲೆ ರಾಜ್ಯದ ಹೆಚ್ಚಿನ ಹಿತಾಸಕ್ತಿಯಲ್ಲಿ ವಿದ್ಯುತ್ ದರದ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಕೆಪಿಎಫ್‌ಬಿಎ ಸರ್ಕಾರವನ್ನು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು