10:20 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆಯಿಂದ ಕುಕ್ಕುಟೋದ್ಯಮಕ್ಕೆ ಹೊಡೆತ: ಸರಕಾರದ ಕ್ರಮಕ್ಕೆ ಕೆಪಿಎಫ್‌ಬಿಎ ವಿರೋಧ

27/06/2023, 14:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯುನಿಟ್‌ಗೆ 2.89 ರೂ.ಗೆ ಏರಿಕೆಯಾಗಿರುವುದ್ದರಿಂದ ಅನೇಕ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ನಡೆಸಲು ಸಾಧ್ಯವಿಲ್ಲವೆಂದು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್‌ ಮತ್ತು ಬ್ರೀಡರ್ಸ್‌ ಅಸೋಸಿಯೇಶನ್(ಕೆಪಿಎಫ್‌ಬಿಎ) ವಿದ್ಯುತ್ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿದೆ.
ಕೆಪಿಎಫ್‌ಬಿಎ ಅಧ್ಯಕ್ಷ ಡಾ. ಸುಶಾಂತ್ ಬಿ.ರೈ ಮಾತನಾಡಿ, ವಿದ್ಯುತ್ ದರದ ಹೆಚ್ಚಳವು ಈಗಾಗಲೇ ಅತ್ಯಂತ ಕಡಿಮೆ ಲಾಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಳಿ ಫಾರಂಗಳಿಗೆ ಹೆಚ್ಚುವರಿ ಹೊರೆಯಾಗಲಿದ್ದು, ಕೋಳಿ ಘಟಕಗಳು ಮತ್ತು ಫೀಡ್ ತಯಾರಿಕೆಯ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಗ್ರಾಹಕರಿಗೂ ಖರೀದಿಯಲ್ಲಿಯೂ ದರ ಏರಿಕೆಯಾಗುವುದರಿಂದ ಸಮಸ್ಯೆಯಾಗುತ್ತದೆ. ಇದರೊಂದಿಗೆ ಅನೇಕ ಘಟಕಗಳು ತಮಿಳುನಾಡಿನ ಹೊಸೂರಿಗೆ ಮತ್ತು ನೆರೆಯ ರಾಜ್ಯಗಳಾದ ಕೇರಳ, ಆಂದ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಇತರ ಗಡಿ ಪ್ರದೇಶಗಳಿಗೆ ವಲಸೆ ಹೋಗುತ್ತವೆ ಇದರಿಂದ ರಾಜ್ಯದ ಆದಾಯ ಜತೆಗೆ ಉದ್ಯೋಗ ಸೃಷ್ಟಿಯಲ್ಲೂ ನಷ್ಟವಾಗುತ್ತದೆ. ಕೋಳಿ ಮತ್ತು ಮೇವು ತಯಾರಿಕಾ ವಲಯದ ಹಿತಾಸಕ್ತಿಯಿಂದ ಮಾತ್ರವಲ್ಲದೆ ಹೂಡಿಕೆಯ ತಾಣವಾಗಿರುವ ಹಿನ್ನೆಲೆ ರಾಜ್ಯದ ಹೆಚ್ಚಿನ ಹಿತಾಸಕ್ತಿಯಲ್ಲಿ ವಿದ್ಯುತ್ ದರದ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಕೆಪಿಎಫ್‌ಬಿಎ ಸರ್ಕಾರವನ್ನು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು